ದಕ್ಷಿಣದ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸುವ ಯತ್ನದ ವಿರುದ್ಧ ಹೋರಾಟ: ಡಿ ಕೆ ಶಿವಕುಮಾರ್

Date:

Advertisements

“ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಕೇಂದ್ರ ಬಿಜೆಪಿ ಸರಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

2026ರಲ್ಲಿ ಲೋಕಸಭಾ ಕ್ಷೇತ್ರಗಳು ಪುನರ್‌ವಿಂಗಡನೆಯಾಗಲಿದ್ದು, ಚುನಾವಣಾ ಆಯೋಗ ಎಲ್ಲ ಸಿದ್ಧತೆಯನ್ನು ನಡೆಸಿದೆ. ಆದರೆ, ಕ್ಷೇತ್ರ ಮರು ವಿಂಗಡನೆ ಜನಸಂಖ್ಯೆಯ ಆಧಾರದಲ್ಲಿ ನಡೆಸುವುದಕ್ಕೆ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಮರುವಿಂಗಡನೆ ಮಾಡಿದರೆ ದಕ್ಷಿಣದ ರಾಜ್ಯಗಳಿಗೆ ಭಾರಿ ಅನ್ಯಾಯವಾಗಲಿದ್ದು, ಉತ್ತರದ ರಾಜ್ಯಗಳಿಗೆ ಹೆಚ್ಚು ಲಾಭವಾಗಲಿದೆ.

ಜನಸಂಖ್ಯೆಯನ್ನು ನಿಯಂತ್ರಿಸಿದ ಕಾರಣ ದಕ್ಷಿಣ ಭಾರತದ ರಾಜ್ಯಗಳು ಬೆಲೆ ತೆರಬೇಕಾದ ಪರಿಸ್ಥಿತಿ ಬಂದಿದೆ. ಈ ಹಿನ್ನೆಲೆ ಕೇಂದ್ರದ ನಿರ್ಧಾರಕ್ಕೆ ದಕ್ಷಿಣ ಭಾರತದ ರಾಜ್ಯಗಳು ಆಕ್ಷೇಪವನ್ನು ವ್ಯಕ್ತಪಡಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಸಿನಿಮಾ ನಟ-ನಟಿಯರು ಬಂದಿಲ್ಲ ಎಂಬ ಆರೋಪಕ್ಕೆ ಡಿಕೆಶಿ… ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಅಂತ ಹೇಳಿದ್ದಾರೆ ಅನ್ನೋದು ಮಾದ್ಮಮಗಳಲ್ಲಿ ವರದಿಯಾಗಿದೆ. ಅದ್ರೆ ಡಿಕೆಶಿಗೆ ಈ ರೀತಿ ಹೇಳಲು ಏನಿದೆ ಹಕ್ಕು…ಈತ ಯಾರು ಯಾವವು ಇವವು ಈ ರೀತಿ ದಮ್ಕಿ ಹಾಕ್ತಾನಲ್ಲ.. ಮೊದಲು ನಿನ್ನ ಪಕ್ಷದವರೇ ನಿನ್ನ ಸಿಎಂ ಆಗಂದೆತ ನಟ್ಟು ಬೋಲ್ಟ್ ಲೂಸ್ ಮಾಡಿದ್ದಾರೆ ಅದನ್ನು ಮೊದಲು ಟೈಟ್ ಮಾಡಿಕೊ..ಆನಂತ್ರ ಚಿತ್ರನಟರ ಬಗ್ಗೆ ಮಾತನಾಡು. ಡಿಸಿಎಂ ಆಗಿದ್ದೀಯಾ ಮಾತಿನ ಮೇಲೆ ಹಿಡಿತ ಇರಲಿ… ನೀವೇನು ಪಾಳೇಗಾರಲ್ಲ….ಸರ್ವಾಧಿಕಾರಿ ಧೋರಣೆ ಬಿಡಿ.. ಇದರಿಂದಾಗಿಯೇ ನೀನಿನ್ನು ಸಿಎಂ ಆಗದೆೇ ಮೂಲೆ ಸೇರಿರುವೆ. ನಿನ್ನೆಂತಹ ದುರಂಕಾರಿ ಸಿಎಂ ಆಗಲು ನಾಲಾಯಕ್ಕು

    ಎಂ.ಸಿವರಾಂ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X