ರಾಯಚೂರು | ಮಾ.16ರಂದು ರಾಜ್ಯಮಟ್ಟದ ಚಿತ್ರ ಸಂತೆ

Date:

Advertisements

ನಶಿಸಿ ಹೋಗುತ್ತಿರುವ ಪುರಾತನ ಚಿತ್ರಕಲೆಯನ್ನು ಉಳಿಸಲು ಹಾಗೂ ಅದನ್ನು ಮತ್ತೆ ಮುನ್ನೆಲೆಗೆ ತರಲು ಮಾ.16 ರಂದು ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಜ್ಯಮಟ್ಟದ ನಾಲ್ಕನೇ ಚಿತ್ರ ಸಂತೆ ಆಯೋಜನೆ ಮಾಡಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ್ ತಿಳಿಸಿದರು.

“ಕಳೆದ ಮೂರು ವರ್ಷದಿಂದ ಚಿತ್ರಸಂತೆಯನ್ನು ಮುಖ್ಯರಸ್ತೆಯ ಫುಟ್ಪಾತ್ ಮೇಲೆ ಮಾಡುತ್ತಿದ್ದೆವು. ಕಲಾ ಸಂಕುಲ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ರಾಯಚೂರು ನಗರದಲ್ಲಿ ಭಾನುವಾರ (ಮಾ.16)ದಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ರವರೆಗೆ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಮತ್ತು ಹೊರ ರಾಜ್ಯದಿಂದ ಹಾಗೂ ಸ್ಥಳೀಯ ಚಿತ್ರಕಲಾವಿದರು ತಮ್ಮ ಕಲಾ ಕೃತಿಗಳನ್ನು ಮಾರಾಟ ಮತ್ತು ಪ್ರದರ್ಶನಕ್ಕಾಗಿ ಈ ಚಿತ್ರ ಸಂತೆಯಲ್ಲಿ ಇಡಲಿದ್ದಾರೆ. ಈಗ ಬೇಸಿಗೆ ದಿನವಿರುವುದರಿಂದ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಲಾಕೃತಿಗಳಿಗೆ ಬಿಸಿಲು ಬೀಳುವುದರಿಂದ ಹಾಳಾಗುತ್ತವೆ. ಹಾಗಾಗಿ ಸುಸಜ್ಜಿತ ಆವರಣದಲ್ಲಿ ಆಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಚಿತ್ರ ಕಲಾವಿದರು ಬೇರೆ ಬೇರೆ ಜಿಲ್ಲೆಯಿಂದ ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಬರುತ್ತಿದ್ದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸಲು ರಂಗ ಮಂದಿರ ವ್ಯವಸ್ಥೆ ಮಾಡಲಿದೆ. ಭಾಗವಹಿಸಿದ ಪ್ರತಿಯೊಬ್ಬ ಕಲಾವಿದರಿಗೆ ನೆನಪಿನ ಕಾಣಿಕೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು” ಎಂದರು.

ಆಸಕ್ತ ಚಿತ್ರ ಕಲಾವಿದರು ತಮ್ಮ ಹೆಸರುಗಳನ್ನು ಮಾ.10ರೊಳಗಾಗಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ
ಅಮರೇಗೌಡ ಮೊಬೈಲ್: 83102 35776 , ಈರಣ್ಣ ಬೆಂಗಾಲಿ: 99867 24198 ನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ರಾಯಚೂರು | ದೇಶದ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ: ಸತ್ಯ ನಾರಾಯಣರಾವ್

ಪತ್ರಿಕಾಗೋಷ್ಠಿಯಲ್ಲಿ ಕಲಾ ಸಂಕುಲ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಾರುತಿ ಬಡಿಗೇರ್, ಚಿತ್ರಕಲಾವಿದ ಅಮರೇಗೌಡ, ಗಾಯಕಿ ಸಂತೋಷಿ ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X