ಜೋರ್ಡಾನ್ನಿಂದ ಇಸ್ರೇಲ್ಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಭಾರತೀಯ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ. ಭಾರತೀಯ ವ್ಯಕ್ತಿಯು ಇಸ್ರೇಲ್ಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಜೋರ್ಡಾನ್ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.
ಮೃತ ಭಾರತೀಯನನ್ನು ಕೇರಳದ ಥಂಬಾ ನಿವಾಸಿ ಥಾಮಸ್ ಗೇಬ್ರಿಯಲ್ ಪೆರೆರಾ ಎಂದು ಗುರುತಿಸಲಾಗಿದೆ. ಹಾಗೆಯೇ ಈ ಘಟನೆ ಫೆಬ್ರವರಿ 10ರಂದು ನಡೆದಿದ್ದು ಸದ್ಯ ಮಾಹಿತಿ ಬಹಿರಂಗವಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಇಸ್ರೇಲ್ ವಿರುದ್ಧ ಪ್ರತಿಭಟನೆ; ಸಂಘಟಕರನ್ನು ವಶಕ್ಕೆ ಪಡೆದ ಪೊಲೀಸರು
“ದುರದೃಷ್ಟಕರ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ” ಎಂದು ಜೋರ್ಡಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
“ರಾಯಭಾರ ಕಚೇರಿಯು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಮೃತ ದೇಹವನ್ನು ಭಾರತಕ್ಕೆ ಸಾಗಿಸಲು ಜೋರ್ಡಾನ್ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದೆ” ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಇದನ್ನು ಓದಿದ್ದೀರಾ? ಅನಿವಾಸಿ ಭಾರತೀಯನ ಕೊಲೆ; 10 ಮಂದಿಗೆ ಜೀವಾವಧಿ ಶಿಕ್ಷೆ
47 ವರ್ಷದ ಥಾಮಸ್ ಪೆರೆರಾ ವಿಸಿಂಟಿಂಗ್ ವೀಸಾದಲ್ಲಿ ಜೋರ್ಡಾನ್ಗೆ ಹೋಗಿದ್ದು, ಅದಾದ ಬಳಿಕ ಇಸ್ರೇಲ್ಗೆ ಪ್ರವೇಶಿಸಲು ಪ್ರಯತ್ನಿಸಿದರು ಎನ್ನಲಾಗಿದೆ. ಮೇನಂಕುಲಂ ನಿವಾಸಿಯಾದ ಪೆರೆರಾ ಸಂಬಂಧಿ ಎಡಿಸನ್ ಕೂಡಾ ಇಸ್ರೇಲ್ಗೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಎಡಿಸನ್ಗೂ ಕೂಡಾ ಗುಂಡು ತಗುಲಿದ್ದು, ಚಿಕಿತ್ಸೆ ನೀಡಿ ಭಾರತಕ್ಕೆ ಹಿಂದಿರುಗಿಸಲಾಗಿದೆ.
The Embassy has learnt of the sad demise of an Indian national in unfortunate circumstances. The Embassy is in touch with the family of the deceased and is working closely with Jordanian authorities for transportation of mortal remains of the deceased. @MEAIndia
— India in Jordan (@IndiainJordan) March 2, 2025
ಪಶ್ಚಿಮ ದಂಡೆಯಲ್ಲಿ ಹಿಂಸಾಚಾರದ ಹೆಚ್ಚಾಗುತ್ತಿದೆ. ಇಸ್ರೇಲ್- ಹಮಾಸ್ ಯುದ್ಧವೂ ಸಂಪೂರ್ಣ ಅಂತ್ಯ ಕಂಡಿಲ್ಲ. ಈ ನಡುವೆ ಗಡಿಗಳಲ್ಲಿ ಇತರೆ ದೇಶಗಳು ಇನ್ನಷ್ಟು ಭದ್ರತೆ ಹೆಚ್ಚಿಸಿದೆ.
