ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

Date:

Advertisements

ಬಿಎಸ್‌ಪಿಯ ಮುಖ್ಯಸ್ಥೆ ಮಾಯಾವತಿ ಅವರು ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ನಾಯಕ ಉದಿತ್ ರಾಜ್, ಕಾಂಗ್ರೆಸ್‌ಗೆ ಸೇರುವಂತೆ ಬಿಎಸ್‌ಪಿ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.

ಇತ್ತೀಚೆಗೆ “ಮಾಯಾವತಿ ಸಾಮಾಜಿಕ ಚಳವಳಿಯ ಕತ್ತು ಹಿಸುಕಿ ದಮನ ಮಾಡಿದ್ದಾರೆ. ಈಗ ಅವರ ಕತ್ತು ಹಿಸುಕುವ ಸಮಯ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಿತ್ ರಾಜ್, ಈಗ ಬಿಎಸ್‌ಪಿಯಲ್ಲಾದ ದಿಢೀರ್ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಮತ್ತೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

Advertisements

“ಮಾಯಾವತಿಯ ಕ್ರಮಗಳೇ ಬಿಎಸ್‌ಪಿಯನ್ನು ನಾಶ ಮಾಡುತ್ತದೆ. ಬಿಎಸ್‌ಪಿಯಲ್ಲಿ ದಲಿತರು ಅಥವಾ ಒಬಿಸಿಗಳಿಗಾಗಿ ಯಾವುದೇ ಯೋಜನೆಗಳು ಉಳಿದಿಲ್ಲ” ಎಂದು ಹೇಳಿದರು. ಹಾಗೆಯೇ ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಬಹುಜನ ಆಂದೋಲನದ ಕತ್ತನ್ನು ಮಾಯಾವತಿ ಸೀಳುತ್ತಿರುವುದಾಗಿ ನಾನು ಫೆಬ್ರವರಿ 17ರಂದೇ ಹೇಳಿದ್ದೆ. ಸಮಾಜ ಇದನ್ನು ಅರ್ಥ ಮಾಡಿಕೊಳ್ಳಬೇಕು, ಮಾಯಾವತಿಯಿಂದ ದೂರ ಉಳಿಯಬೇಕು ಎಂಬುದೇ ನನ್ನ ಹೇಳಿಕೆಯ ಅರ್ಥವಾಗಿತ್ತು” ಎಂದು ಹೇಳಿಕೊಂಡಿದ್ದಾರೆ.

“ನಾನು ಮಾಯಾವತಿ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ನನ್ನ ಮೇಲೆ ಬೆದರಿಕೆ ಹಾಕಲಾಗಿದೆ. ನನ್ನ ಹತ್ಯೆ ಮಾಡಿದವರಿಗೆ ನಗದು ಬಹುಮಾನವನ್ನು ಕೂಡಾ ಘೋಷಿಸಲಾಗಿತ್ತು” ಎಂದು ದೂರಿದ್ದಾರೆ.

ಇದನ್ನು ಓದಿದ್ದೀರಾ? ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಆಕಾಶ್ ಆನಂದ್ ವಜಾ

ಭಾನುವಾರ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ತನ್ನ ಸೋದರಳಿಯನನ್ನು ಎಲ್ಲಾ ಸ್ಥಾನಗಳಿಂದ ತೆಗೆದುಹಾಕುವ ನಿರ್ಧಾರವನ್ನು ದಿಢೀರ್ ಆಗಿ ಕೈಗೊಂಡಿದ್ದು, ಮಾಯಾವತಿ ನಿರ್ಧಾರವೀಗ ರಾಜಕೀಯ ಸಂಚಲನ ಮೂಡಿಸಿದೆ. ಈ ಹಿಂದೆ ಒಂದೆರಡು ಬಾರಿ ಆಕಾಶ್‌ಗೆ ರಾಜ್ಯ ನಾಯಕರ ಸ್ಥಾನ ನೀಡಲಾಗಿತ್ತು, ಹಾಗೆಯೇ ಹಿಂಪಡೆಯಲಾಗಿತ್ತು, ಮತ್ತೆ ಸ್ಥಾನ ನೀಡಲಾಗಿತ್ತು.

“ನಾನು ಸಾಯುವವರೆಗೂ ನಾನೇ ಮುಖ್ಯಸ್ಥೆ, ಉತ್ತಾರಾಧಿಕಾರಿ ಘೋಷಿಸಲ್ಲ” ಎಂಬ ಮಾಯಾವತಿ ಹೇಳಿಕೆಯು ಸದ್ಯ ಬಿಎಸ್‌ಪಿ ಮಾತ್ರವಲ್ಲ ಇತರೆ ರಾಜಕೀಯ ಪಕ್ಷಗಳಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಕಾಂಗ್ರೆಸ್ ಅಸಮಾಧಾನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕರುಗಳನ್ನು ತಮ್ಮೆಡೆ ಸೆಳೆಯುವ ಯತ್ನದಲ್ಲಿ ತೊಡಗಿದೆ. ಎಸ್‌ಪಿ ಮಾಯಾವತಿ ನಡೆಯನ್ನು “ವಿಚಿತ್ರ ನಿರ್ಧಾರ” ಎಂದು ಕರೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X