ಬೆಳಗಾವಿ | ಉದ್ಯಮಿ ಅಪರಹಣ ಪ್ರಕರಣ; ಪ್ರಮುಖ ಆರೋಪಿ ಮಂಜುಳಾ ರಾಮನಗಟ್ಟಿ ಬಂಧನ

Date:

Advertisements

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್‌ನ ಕೊಣ್ಣೂರು ಮೂಲದ ಮಂಜುಳಾ ರಾಮನಗಟ್ಟಿಯನ್ನು ಬಂಧಿಸಲಾಗಿದೆ.

ತಾಲೂಕಿನ ತಹಶೀಲ್ದಾರ್‌ ಕಚೇರಿಯಲ್ಲಿ ಡಿ ಗ್ರೂಪ್‌ ಹಾಗೂ ಹೊರಗುತ್ತಿಗೆ ನೌಕರಿ ಕೊಡಿಸುವುದಾಗಿ ಇಬ್ಬರಿಂದ ತಲಾ ₹2.5 ಲಕ್ಷ ಲಂಚ ಪಡೆದಿರುವುದಾಗಿ ಕುಲಗೋಡ ಪೊಲೀಸ್‌ ಠಾಣೆಯಲ್ಲಿ ಮಂಜುಳಾ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಜುಳಾ ಜತೆಗೆ ಯಲ್ಲೇಶ ವಾಲಿಕಾರ ಹಾಗೂ ಪರಶುರಾಮ ಕಾಂಬಳೆಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಎಸ್‌ಪಿ ಡಾ.ಭೀಮಾಶಂಕರ ಗುಳೇದ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ರಾಜಕೀಯ ಪಕ್ಷದೊಂದಿಗೆ ಆಕೆ ಗುರುತಿಸಿಕೊಂಡಿದ್ದಾರೆ. ಆದರೆ ಅಪರಹರಣಕ್ಕೂ ಆ ರಾಜಕೀಯ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಮಂಜುಳಾ ಬಂಧಿಸದಂತೆ ಯಾವ ರಾಜಕಾರಣಿಯೂ ಪ್ರಭಾವ ಬೀರಿಲ್ಲ. ಹಾಗಿದ್ದಿದ್ದರೆ 7 ಮಂದಿಯನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ” ಎಂದರು.

Advertisements

“ಬಸವರಾಜ ಅಂಬಿ ಅವರ ಅಪಹರಣಕ್ಕೆ ಮಂಜುಳಾ ಅವರೇ ಸಂಚು ರೂಪಿಸಿದ್ದರು. ಹಣ ಪಡೆದು ಐಶಾರಾಮಿ ಜೀವನ ನಡೆಸುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇನ್ನು ಬಸವರಾಜು ಬಳಿ ಕಸಿದುಕೊಂಡಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 6 ಮೊಬೈಲ್‌, 4 ಕಾರು ಸೇರಿದಂತೆ ಇತರೆ ವಸ್ತುಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ

ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಮಹಿಳೆ ಮಂಜುಳಾ ರಾಮನಗಟ್ಟಿ ಕಾಂಗ್ರೆಸ್‌ ಕಾರ್ಯಕರ್ತೆ ಅಲ್ಲ. ಅವರಿಗೆ ಪಕ್ಷದ ಯಾವುದೇ ಹುದ್ದೆ ಅಥವಾ ಸದಸ್ಯತ್ವ ನೀಡಿಲ್ಲ ಎಂದು ಕಾಂಗ್ರೆಸ್ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X