ಮರ್ಯಾದೆಗೇಡು ಹತ್ಯೆ| ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಕುಟುಂಬ

Date:

Advertisements

ದಲಿತ ಯುವಕನನ್ನು ಪ್ರೀತಿಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರೇ ಹತ್ಯೆಗೈದಿರುವ ಮರ್ಯಾದಾಗೇಡು ಹತ್ಯೆ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಣ್ಣ ಸೇರಿ ಕೊಲೆ ಮಾಡಿದ್ದಾರೆ.

ತಾಲೂಕಿನ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮರ್ಯಾದಾಗೇಡು ಹತ್ಯೆ ಪ್ರಕರಣದಲ್ಲಿ ಬಾಲಕಿಯ ತಂದೆ ಪರಶುರಾಮ, ಚಿಕ್ಕಪ್ಪ ತುಕಾರಾಮ ಮತ್ತು ಆಕೆಯ ಅಣ್ಣ ಶಿವರಾಜು ಅವರನ್ನು ಪೊಲೀಸರು ಜೂನ್ 10 ರಂದು ಬಂಧಿಸಿದ್ದಾರೆ.

ನಾಯಕ ಸಮುದಾಯಕ್ಕೆ (ಎಸ್‌ಟಿ) ಸೇರಿದ ಯುವತಿ ಶಿರಾದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದರು. ಶಿರಾದಲ್ಲಿಯೇ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಅಲ್ಲಿಯ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ಓದುತಿದ್ದ ದಲಿತ ವಿದ್ಯಾರ್ಥಿ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.

Advertisements

ಇನ್ನು ಮೂರು ತಿಂಗಳಲ್ಲಿ ಯುವತಿ 18 ವರ್ಷ ತುಂಬುತ್ತಿತ್ತು. ಬಳಿಕ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಅವರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಆತನೊಂದಿಗಿನ ಪ್ರೀತಿಯನ್ನು ತೊರೆಯುವಂತೆ ಒತ್ತಾಯಿಸಿದ್ದರು.

“ಯುವತಿ ಪೋಷಕರಿಗೆ ತಿಳಿಸದೆ ಕೆಲಕಾಲ ಮನೆಯಿಂದ ನಾಪತ್ತೆಯಾಗಿದ್ದಳು. ಯುವತಿಯ ಕುಟುಂಬದವರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ. ಬದಲಾಗಿ, ಅವರೇ ಆಕೆಯನ್ನು ಹುಡುಕಿ, ಜೂನ್ 9ರಂದು ಮನೆಗೆ ಕರೆತಂದಿದ್ದಾರೆ” ಎಂದು ತುಮಕೂರು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಜೂನ್ 9ರಂದು ಬಾಲಕಿಯ ತಂದೆ, ಚಿಕ್ಕಪ್ಪ ಮತ್ತು ಸಹೋದರ – ಮೂವರೂ ಸೇರಿ ಆಕೆಗೆ ವಿಷ ಕುಡಿಯುವಂತೆ ಒತ್ತಾಯಿಸಿದ್ದಾರೆ. ಬಾಲಕಿ ಇದಕ್ಕೆ ನಿರಾಕರಿಸಿದಾಗ ಕುರಿ ಕಟ್ಟಲು ಬಳಸುವ ಹಗ್ಗದಿಂದ ಕತ್ತನ್ನು ಬಿಗಿದು ಕೊಲೆ ಮಾಡಿದ್ದಾರೆ. ಕೊಲೆ ಪ್ರಕರಣವನ್ನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಬಿಂಬಿಸಿದ್ದಾರೆ. ಬಳಿಕ ಆಕೆಯ ಅಂತ್ಯಕ್ರಿಯೆಯನ್ನು ಸಹ ಮಾಡಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚೇಳೂರು ಪೊಲೀಸರು ವಿಚಾರಣೆ ನಡೆಸಿದ್ದು, ಬಾಲಕಿಯನ್ನು ಮನೆಯವರೇ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

“ಆತ್ಮಹತ್ಯೆ ಮತ್ತು ಸಾಕ್ಷ್ಯ ನಾಶದ ಪ್ರಕರಣವನ್ನು ದಾಖಲಿಸಿದ್ದೆವು. ವಿಚಾರಣೆ ನಡೆಸಿದ ನಂತರ ಕೊಲೆ ಪ್ರಕರಣ ದಾಖಲಿಸಲಾಗಿದೆ” ಎಂದು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X