ಮಾಯಾವತಿಯವರ ಎಲ್ಲಾ ನಿರ್ಧಾರಗಳನ್ನು ಗೌರವಿಸುತ್ತೇನೆ: ಆಕಾಶ್ ಆನಂದ್

Date:

Advertisements

ಬಿಎಸ್‌ಪಿ ನಾಯಕಿ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಮಾಯಾವತಿಯವರ ರಾಜಕೀಯ ಉತ್ತರಾಧಿಕಾರಿ ಮತ್ತು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕ ಜವಾಬ್ದಾರಿಗಳಿಂದ ಬಿಡುಗಡೆ ಮಾಡಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಕಾಶ್ ಆನಂದ್, “ಮಾಯಾವತಿಯವರ ಎಲ್ಲಾ ನಿರ್ಧಾರವನ್ನು ಗೌರವಿಸುತ್ತೇನೆ” ಎಂದು ಹೇಳಿದ್ದಾರೆ.

ದಿಢೀರ್ ಆಗಿ ಮಾಯಾವತಿ ಕೈಗೊಂಡಿರುವ ನಿರ್ಧಾರವು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಒಂದೆಡೆ ಕಾಂಗ್ರೆಸ್ ಅಸಮಾಧಾನಗೊಂಡಿರುವ ಬಿಎಸ್‌ಪಿ ಕಾರ್ಯಕರ್ತರನ್ನು ತನ್ನೆಡೆ ಸೆಳೆಯುವ ಯತ್ನ ಮಾಡುತ್ತಿದೆ. ಇನ್ನು ಎಸ್‌ಪಿ ಸೇರಿ ಕೆಲವು ಪಕ್ಷದ ನಾಯಕರುಗಳು ಬಿಎಸ್‌ಪಿ ನಾಯಕಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಸಾಮಾಜಿಕ ಚಳವಳಿಯ ದಮನ ಮಾಡಿದ ಮಾಯಾವತಿಯ ಕತ್ತು ಹಿಸುಕುವ ಸಮಯ ಬಂದಿದೆ: ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

Advertisements

ಇವೆಲ್ಲವುದರ ನಡುವೆ ಆಕಾಶ್ ಆನಂದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಪರಮಪೂಜ್ಯ, ಆದರಣೀಯ ಸಹೋದರಿ ಮಾಯಾವತಿ ಅವರ ಕಾರ್ಯಕರ್ತನಾಗಿದ್ದೇನೆ. ಅವರ ನೇತೃತ್ವದಲ್ಲಿ ನಾನು ತ್ಯಾಗ, ನಿಷ್ಠೆ ಮತ್ತು ಸಮರ್ಪಣೆಯನ್ನು ಎಂದಿಗೂ ಮರೆಯದ ಪಾಠವನ್ನು ಕಲಿತ್ತಿದ್ದೇನೆ. ಇವೆಲ್ಲವೂ ನನಗೆ ಬರೀ ವಿಚಾರವಲ್ಲ, ಬದಲಾಗಿ ಜೀವನದ ಉದ್ದೇಶವಾಗಿದೆ. ಗೌರವಾನ್ವಿತ ಸಹೋದರಿ ಅವರ ಎಲ್ಲಾ ನಿರ್ಧಾರವು ನನಗೆ ಪ್ರೀತಿಯ ರೇಖೆಗೆ ಸಮವಾಗಿದೆ. ನಾನು ಅವರ ಎಲ್ಲಾ ನಿರ್ಧಾರವನ್ನು ಗೌರವಿಸುತ್ತೇನೆ. ಆ ನಿರ್ಧಾರದೊಂದಿಗೆ ನಾನು ನಿಲ್ಲುತ್ತೇನೆ” ಎಂದು ತಿಳಿಸಿದ್ದಾರೆ.

“ಮಾಯಾವತಿಯವರು ನನ್ನನ್ನು ಪಕ್ಷದ ಎಲ್ಲಾ ಸ್ಥಾನದಿಂದ ಮುಕ್ತಗೊಳಿಸಿರುವುದು ನನಗೆ ವೈಯಕ್ತಿಕವಾಗಿ ಭಾವಾನಾತ್ಮಕ ವಿಚಾರವಾಗಿದೆ. ಆದರೆ ಮುಂದೆ ಚುನಾವಣೆ ಬರಲಿದೆ. ಪರೀಕ್ಷೆ ಕಠಿಣವಾಗಿದೆ ಮತ್ತು ಹೋರಾಟ ದೀರ್ಘವಾಗಿದೆ” ಎಂದು ಆಕಾಶ್ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಆಕಾಶ್ ಆನಂದ್ ವಜಾ | ಕಾಂಗ್ರೆಸ್‌ಗೆ ಸೇರಿ; ಬಿಎಸ್‌ಪಿ ಕಾರ್ಯಕರ್ತರಿಗೆ ಉದಿತ್ ರಾಜ್ ಆಹ್ವಾನ

“ಇಂತಹ ಕಠಿಣ ಸಂದರ್ಭದಲ್ಲಿ ದೈರ್ಯ ಮತ್ತು ಸಂಕಲ್ಪ ಮುಖ್ಯವಾಗುತ್ತದೆ. ಬಹುಜನದ ಓರ್ವ ಕಾರ್ಯಕರ್ತನಾಗಿ ನಾನು ನಿಷ್ಠೆಯಿಂದ ಎಲ್ಲಾ ಕೆಲಸವನ್ನು ಮಾಡುತ್ತೇನೆ. ನನ್ನ ಕೊನೆಯ ಉಸಿರು ಇರುವವರೆಗೂ ನನ್ನ ಸಮಾಜದ ಹಕ್ಕಿಗಾಗಿ ಹೋರಾಟ ನಡೆಸುತ್ತಲೇ ಇರುತ್ತೇನೆ” ಎಂದಿದ್ದಾರೆ.

“ಬಿಎಸ್‌ಪಿಯ ಈ ನಿರ್ಧಾರದಿಂದ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದು ಕೆಲವು ವಿರೋಧ ಪಕ್ಷದ ನಾಯಕರು ಅಂದುಕೊಂಡಿದ್ದಾರೆ. ಆದರೆ ಬಹುಜನ ಚಳುವಳಿ ಯಾವುದೇ ರಾಜಕೀಯ ಜೀವನವಲ್ಲ, ಬದಲಾಗಿ ಕೋಟ್ಯಾಂತರ ದಲಿತರು, ಶೋಷಿತರು, ವಂಚಿತರು ಮತ್ತು ಬಡವರ ಆತ್ಮ ಸಮ್ಮಾನಕ್ಕಾಗಿ, ಸ್ವಾಭಿಮಾನಕ್ಕಾಗಿ ಮಾಡುವ ಹೋರಾಟ ಎಂದು ಅವರು ತಿಳಿಯಬೇಕು” ಎಂದು ಹೇಳಿದ್ದಾರೆ.

“ಇದು ಒಂದು ವಿಚಾರವಾಗಿದೆ, ಆಂದೋಲನವಾಗಿದೆ, ಇದನ್ನು ನಾವು ಧಮನಿಸಲು ಸಾಧ್ಯವಾಗುವುದಿಲ್ಲ. ಈ ಜ್ವಾಲೆಯು ಉರಿಯುತ್ತಿರುವಂತೆಯೇ ನೋಡಿಕೊಳ್ಳಲು ಮತ್ತು ಈ ಹೋರಾಟಕ್ಕಾಗಿ ತಮ್ಮನ್ನು ಮುಡಿಪಾಗಿಡಲು ಲಕ್ಷಾಂತರು ಜನರು ಇದ್ದಾರೆ” ಎಂದು ಆಕಾಶ್ ಆನಂದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X