ಹಮಾಸ್ ಮೇಲೆ ನಿರ್ಬಂಧ ಹೇರಲು ಭಾರತಕ್ಕೆ ಇಸ್ರೇಲ್ ಒತ್ತಡ

Date:

Advertisements

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು, ಹಮಾಸ್ ಸಂಘಟನೆಯನ್ನು ನಿರ್ಮೂಲನೆಗೊಳಿಸಲು ಇಸ್ರೇಲ್ ಹವಣಿಸುತ್ತಿದೆ. ಶಾಂತಿ ಒಪ್ಪಂದದ ಸೋಗಿನಲ್ಲಿ ಗಾಝಾವನ್ನು ಪ್ಯಾಲೆಸ್ತೀನಿಯರಿಂದ ಕಿತ್ತುಕೊಳ್ಳಲು ಅಮೆರಿಕ ಕೂಡ ಇಸ್ರೇಲ್‌ಗೆ ಸಹಾಯ ಮಾಡುತ್ತಿದೆ. ಈ ನಡುವೆ, ಹಮಾಸ್‌ ಸಂಘಟನೆಯಲ್ಲಿ ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸುವಂತೆ ಭಾರತದ ಮೇಲೆ ಇಸ್ರೇಲ್‌ ಒತ್ತಡ ಹೇರುತ್ತಿದೆ.

ಇತ್ತೀಚೆಗೆ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ‘ಕಾಶ್ಮೀರ ಸಾಲಿಡಾರಿಟಿ ಡೇ’ ಸಮಾರಂಭ ನಡೆದಿದೆ. ಈ ಕಾರ್ಯಕ್ರಮದಲ್ಲಿ ಹಮಾಸ್‌ನ ಹಲವು ನಾಯಕರು ಭಾಗವಹಿಸಿದ್ದರು. ಹಮಾಸ್ ನಾಯಕರು ಮೊದಲ ಬಾರಿಗೆ ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಇ-ಮೊಹ್ಮದ್ ಸಂಘಟನೆಗಳ ಜೊತೆ ಪಿಒಕೆಗೆ ಬಂದಿದ್ದರು. ಇದನ್ನೇ ದಾಳವಾಗಿ ಮಾಡಿಕೊಂಡಿರುವ ಇಸ್ರೇಲ್‌, ಭಾರತದ ಮೇಲೆ ಒತ್ತಡ ಹೇರುವುದನ್ನು ಮತ್ತೆ ಆರಂಭಿಸಿದೆ.

ಇಸ್ರೇಲ್‌ನ ರಾಜತಂತ್ರಿಕರು ಭಾರತೀಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಹಮಾಸ್‌ ಸಂಘಟನೆಯನ್ನುಯ ‘ಭಯೋತ್ಪಾದಕ ಸಂಘನೆ’ ಎಂದು ಘೋಷಿಸುವಂತೆ ಒತ್ತಡ ಹಾಕಿದ್ದಾರೆ ಎಂದು ವರದಿಯಾಗಿದೆ.

Advertisements

ಗಾಜಾ ಮೇಲೆ ಇಸ್ರೇಲ್ ಕಳೆದ 2 ವರ್ಷಗಳಿಂದ ದಾಳಿ ನಡೆಸುತ್ತಲೇ ಇದೆ. ಈವರೆಗೆ ಸುಮಾರು 52,000ಕ್ಕೂ ಹೆಚ್ಚು ಮಂದಿಯನ್ನು ಕೊಂದಿದೆ. ಆದಾಗ್ಯೂ, 2023ರ ಅಕ್ಟೋಬರ್‌ನಲ್ಲಿ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ್ದ ದಾಳಿಯನ್ನು ಮಾತ್ರವೇ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರ ಖಂಡಿಸಿತ್ತು. ಇಸ್ರೇಲ್‌ ಪರವಾಗಿ ಮಾತನಾಡಿತ್ತು. ಆದರೂ, ಹಮಾಸ್‌ ಸಂಘಟನೆಯನ್ನು ಭಯೋತ್ಪಾದಕವೆಂದು ಘೋಷಿಸಿಲ್ಲ. ಸಂಘಟನೆ ಮೇಲೆ ನಿರ್ಬಂಧ, ನಿಷೇಧದಂತಹ ಕ್ರಮ ಕೈಗೊಂಡಿಲ್ಲ.

ಈಗಾಗಲೇ, ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ಹಮಾಸ್‌ ಸಂಘಟನೆಗೆ ಮೇಲೆ ನಿರ್ಬಂಧ ಹೇರಿವೆ. ಅಂತೆಯೇ, ಭಾರತ ಕೂಡ ನಿಷೇಧ ಹೇರಬೇಕೆಂದು ಇಸ್ರೇಲ್ ಒತ್ತಾಯಿಸುತ್ತಿದೆ.

ಈ ಹಿಂದೆ, ಮುಂಬೈನಲ್ಲಿ ದಾಳಿ ನಡೆಸಿದ್ದ ಪಾಕಿಸ್ತಾನದ ಎಲ್‌ಇಟಿ ಸಂಘಟನೆಯನ್ನು 2023ರಲ್ಲಿ ಇಸ್ರೇಲ್ ನಿಷೇಧಿಸಿತ್ತು. ಅಂತೆಯೇ, ಭಾರತ ಕೂಡ ಹಮಾಸ್‌ಅನ್ನು ನಿಷೇಧಿಸುತ್ತದೆ ಎಂದು ಭಾರತದಲ್ಲಿದ್ದ ಇಸ್ರೇಲ್ ರಾಯಭಾರಿ ನವೋರ್ ಗಿಲನ್ ಹೇಳಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X