ಕುಂಭಮೇಳ | ಭಕ್ತರ ಆತಂಕ ತಪ್ಪಿಸಲು ಕಾಲ್ತುಳಿತದ ವಾಸ್ತವ ತಿಳಿಸಿಲ್ಲ: ಸಿಎಂ ಆದಿತ್ಯನಾಥ್ ಸಮಜಾಯಿಷಿ

Date:

Advertisements

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ ಜನವರಿ 29ರಂದು ಕಾಲ್ತುಳಿತ ಸಂಭವಿಸಿತ್ತು. ಆ ಘಟನೆಯ ವಾಸ್ತವವನ್ನು ತಿಳಿಸದಿರುವುದರ ಹಿಂದೆ ಭಕ್ತರ ಆತಂಕ ತಪ್ಪಿಸುವ ಉದ್ದೇಶವಿತ್ತು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಲಕ್ನೋದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಕಾಲ್ತುಳಿತ ಘಟನೆಯ ಬಗ್ಗೆ ಮಾತನಾಡಿದರು. “ಮೌನಿ ಅಮವಾಸ್ಯೆಯ (ಜ.29) ದಿನ ನಡೆದ ಕಾಲ್ತುಳಿತದ ಬಳಿಕ, ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರವು ತ್ವರಿತವಾಗಿ ಕಾರ್ಯನಿರ್ವಹಿಸಿದೆ. ಆ ಸಂದರ್ಭದಲ್ಲಿ 8 ಕೋಟಿ ಭಕ್ತರು ಮತ್ತು ಸಾಧುಗಳು ಕುಂಭಮೇಳದಲ್ಲಿ ಭಾಗಿಯಾಗಿದ್ದರು. ಘಟನೆಯಿಂದ ಹಲವಾರು ಭಕ್ತರು ಭಯಭೀತರಾಗಿದ್ದರು. ಎಲ್ಲರೂ ಆತಂಕಗೊಂಡರೆ, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇತ್ತು. ಹೀಗಾಗಿ, ಘಟನೆ ಬಗ್ಗೆ ಹೆಚ್ಚು ಚರ್ಚೆ ಮಾಡಲಿಲ್ಲ ಮತ್ತು ವಾಸ್ತವವನ್ನು ತಿಳಿಸಿರಲಿಲ್ಲ” ಎಂದು ಹೇಳಿದ್ದಾರೆ.

“ಅಧಿಕಾರಿಗಳು ಜನಸಂದಣಿಯನ್ನು ಬಹಳ ಸೂಕ್ಷ್ಮವಾಗಿ ನಿಭಾಯಿಸಿದ್ದಾರೆ. ಕೋಟ್ಯಂತರ ಭಕ್ತರು ಭಾಗವಹಿಸುವ ಕಠಿಣ ಸಂದರ್ಭಗಳಲ್ಲಿ ಹಲವರು ಭಯಭೀತರಾಗುತ್ತಾರೆ. ಆ ಸಮಯದಲ್ಲಿ ತಾಳ್ಮೆಯಿಂದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

Advertisements

ಜನವರಿ 29ರಂದು ನಡೆದ ಕಾಲ್ತಳಿತ ಘಟನೆಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಆದರೆ, ಕನಿಷ್ಠ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಲವರು ವಾದಿಸುತ್ತಿದ್ದಾರೆ. ಮಾತ್ರವಲ್ಲದೆ, ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂಬ ಆರೋಪಗಳೂ ಇವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X