16 ಮತಗಳಿಂದ ಸೋತಿದ್ದ ಸೌಮ್ಯಾರೆಡ್ಡಿ ಕೇಸು-ಸುಪ್ರೀಮ್ ಕೋರ್ಟ್ ಏನು ಹೇಳಿತು?

Date:

Advertisements

2023ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಮತ ಎಣಿಕೆ ವಿವಾದದ ಸಂಬಂಧ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಚುನಾವಣಾ ಎಣಿಕೆಯಲ್ಲಿ ಅಚಾತುರ್ಯ ನಡೆದಿದೆ ಎಂದು ಆರೋಪಿಸಿದ್ದ ಸೌಮ್ಯಾ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಕೋರಿಕೆ ಮೇರೆಗೆ ಮತ ಎಣಿಕೆಗೆ ಸಂಬಂಧಿಸಿದ ಡಿವಿಡಿ ಮತ್ತು ಚುನಾವಣಾ ದಾಖಲೆಗಳನ್ನು ರೆಕಾರ್ಡ್‌ನಲ್ಲಿ ಇರಿಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ರಾಮಮೂರ್ತಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, “ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಹೇಳಿದೆ. ಲಿಖಿತ ಹೇಳಿಕೆ ಸಲ್ಲಿಸುವಂತೆ ರಾಮಮೂರ್ತಿ ಅವರಿಗೆ ಸೂಚನೆ ನೀಡಿದೆ.

Advertisements

2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಲ್ಲಿ ಸೌಮ್ಯಾ ರೆಡ್ಡಿ ಕೇವಲ 16 ಮತಗಳ ಅಂತರದಿಂಂದ ರಾಮಮೂರ್ತಿ ವಿರುದ್ಧ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ ಎಂದು ಸೌಮ್ಯಾ ರೆಡ್ಡಿ ಆರೋಪಿಸಿದ್ದರು. ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ಅವರ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟ್‌, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X