ವಿಜಯಪುರ | ಮೌಢ್ಯ ಬಿಡಿ; ವೈಜ್ಞಾನಿಕವಾಗಿ ಪರಾಮರ್ಶಿಸಿ: ಎಸ್‌ ಕುಮಾರ್

Date:

Advertisements

ವೈಜ್ಞಾನಿಕ ಮತ್ತು ತಂತ್ರಜ್ಞಾನ ಯುಗ ಇಷ್ಟು ಮುಂದುವರೆದರೂ ಮೂಢನಂಬಿಕೆಗಳು ಹಾಗೂ ಅಂಧ ಆಚರಣೆಗಳು ಸಾಕಷ್ಟಿವೆ. ಪ್ರತಿಯೊಬ್ಬ ವ್ಯಕ್ತಿಯ ಜೀವನವು ವಿಜ್ಞಾನಮಯ. ಪ್ರತಿಯೊಂದು ಘಟನೆಯನ್ನೂ ವೈಜ್ಞಾನಿಕ ತಳಹದಿ ಮೇಲೆ ಪರಮರ್ಸಿಸಬೇಕು ಎಂದು ವಿದ್ಯಾವರ್ಧಕ ಸಂಸ್ಥೆ ಸಂಸ್ಥಾಪಕ ಎಸ್ ಕುಮಾರ್ ತಿಳಿಸಿದರು.

ವಿಜಯಪುರ ನಗರದ ಬರಟಗಿ ರಸ್ತೆಯಲ್ಲಿರುವ ಸರಸ್ವತಿ ಆಂಗ್ಲ ಮಾಧ್ಯಮ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಮಹೇಶ್‌ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ʼಮೂಢನಂಬಿಕೆಗಳು ಮತ್ತು ಪವಾಡ ರಹಸ್ಯ ಬಯಲುʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಸ್ಥೆ ಅಧ್ಯಕ್ಷೆ ಡಾ. ಎಚ್.ಟಿ. ಲತಾದೇವಿ ಮಾತನಾಡಿ, “ಮಾನವ ಇಂದು ಚಂದ್ರನ ಮೇಲೆ ಕಾಲಿಟ್ಟ, ಮಂಗಳನ ಅಂಗಳಕ್ಕೆ ಲಗ್ಗೆ ಹಾಕಿದ್ದಾನೆ. ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಅನೇಕ ಮೂಢನಂಬಿಕೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲಿವರೆಗೆ ಮೂಢ್ಯ ಬಿಟ್ಟು ಹೊರಗೆ ಬರಲು ಆಗುವುದಿಲ್ಲವೋ, ಅಲ್ಲಿವರೆಗೆ ವಿಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ” ಎಂದರು.

Advertisements

ಅತ್ತಳಿಯ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಎಸ್.ಕಾಂಬಳೆ ಮಾತನಾಡಿ, “ಮೂಢನಂಬಿಕೆ ಮತ್ತು ಕಂದಾಚಾರಗಳು ನಮ್ಮ ಸಮಾಜವನ್ನು ನಿರಂತರವಾಗಿ ಕಾಡುತ್ತಿರುವ ಸಮಸ್ಯೆಗಳಾಗಿವೆ. ಅಕ್ಷರಸ್ಥರು ಮತ್ತು ಅನಕ್ಷರಸ್ಥರು ಈ ಸಮಸ್ಯೆಯ ಸಮಾನ ಬಲುಪಶುಗಳಾಗಿದ್ದಾರೆ. ಪ್ರತಿನಿತ್ಯ ಜರುಗುತ್ತಿರುವ ಘಟನೆಗಳಾದ ನೀರಿನಿಂದ ದೀಪ ಉರಿಸುವುದು, ಕುದಿಯುವ ಎಣ್ಣೆಯಲ್ಲಿ ಕೈ ಅದ್ದುವುದು, ಬೆಂಕಿಯಲ್ಲಿ ನಡೆಯುವುದು, ಮೈಗೆ ಬೆಂಕಿ ಹಚ್ಚಿಕೊಳ್ಳುವುದು ಮುಂತಾದ ಘಟನೆಗಳ ಹಿಂದೆ ವೈಜ್ಞಾನಿಕ ಕಾರಣಗಳು ಬೇರೆಯೇ ಇರುತ್ತವೆ. ಅವುಗಳನ್ನು ಕಂಡುಕೊಳ್ಳಬೇಕಷ್ಟೇ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

WhatsApp Image 2025 03 04 at 2.38.34 PM

ಇದನ್ನೂ ಓದಿ: ವಿಜಯಪುರ | ಪಾಳುಬಿದ್ದ ಸಂತೆ ಮಾರುಕಟ್ಟೆ; ಲಕ್ಷಾಂತರ ರೂಪಾಯಿ ವ್ಯರ್ಥ

ಶಾಲೆಯ ವಿಜ್ಞಾನ ಶಿಕ್ಷಕ ರವಿ ಪತಂಗೆ, ವಿದ್ಯಾರ್ಥಿಗಳಿಂದ ವಿವಿಧ ಮಾದರಿಗಳನ್ನು ತಯಾರಿಸಿ ಅವುಗಳ ವೈಜ್ಞಾನಿಕ ಉಪಯೋಗಗಳನ್ನು ತಿಳಿಸಿಕೊಟ್ಟರು. ಈ ವೇಳೆ ಹತ್ತಳಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿಎಸ್ ಕಾಂಬಳೆ ಅವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X