ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ಕಮಿಷನ್‌ಗಾಗಿ: ಬಿ ವೈ ವಿಜಯೇಂದ್ರ ಆರೋಪ

Date:

Advertisements

ಕಾಂಗ್ರೆಸ್‌ ಸರ್ಕಾರವು ನೆರೆಯ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶ ನೋಡಿದರೆ ಅದರಲ್ಲಿ ಕಮಿಷನ್‌ಗಾಗಿ ಎಂಬ ಅನುಮಾನ ಮೂಡುತ್ತಿದೆ. ಅಷ್ಟು ಪ್ರೀತಿ ಇದ್ದರೆ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಬಹುದಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕರ್ನಾಟಕದ ರೈತರ ಬಳಿ ಉತ್ತಮ ಗುಣಮಟ್ಟದ ಅಕ್ಕಿ ಸಿಗುತ್ತದೆ. ಅದನ್ನೇ ಖರೀದಿಸಿ ಕೊಟ್ಟರೆ ನಮ್ಮ ರೈತರಿಗೂ ಅನುಕೂಲವಾಗಲಿದೆ. ಅದನ್ನು ಬಿಟ್ಟು ಬೇರೆ ರಾಜ್ಯಗಳಿಂದ ಅಕ್ಕಿ ತರುವ ಉದ್ದೇಶವೇನು? ಕಮಿಷನ್ ಹೊಡೆಯುವುದಲ್ಲದೇ ಬೇರೇನೂ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ವಾಸ್ತವ ಅರಿವಾಗುತ್ತಿದೆ. ಯಾವ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡಲಾಗದೇ ಜನರ ಕೈಗೆಟುಕದೇ ಇರಲು ಇಲ್ಲ ಸಲ್ಲದ ಷರತ್ತು ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗದೇ ಒದ್ದಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

Advertisements

ಕಾಂಗ್ರೆಸ್‌ ಗ್ಯಾರಂಟಿಗಳು ರಾಜ್ಯವನ್ನು ಅರಾಜಕತೆಯತ್ತ ದೂಡುವ ಅಪಾಯವಿದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲವಾದ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ಮುಂದಾಗಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಹೌದ ವಿಜಯೇಂದ್ರ ಅವರೇ, ಹಾಗಾದ್ರೆ ನಿಮ್ಮ ತಂದೆಯವರಿಗೆ ಮತ್ತು ಮೋದಿ ಅವರಿಗೆ ಹೇಳಿ ಕೇಂದ್ರದಿಂದ ಹೆಚ್ಚುವರಿ ಅಕ್ಕಿಯನ್ನು ರಾಜ್ಯ ಸರ್ಕಾರದಿಂದ ಪ್ರತಿ ಕೆಜಿ ಅಕ್ಕಿಗೆ 36 ರೂಪಾಯಿ ಹಣ ಪಡೆದು ನೀಡುವಂತೆ ಮನವಿ ಮಾಡಿ. ಅದನ್ನು ಬಿಟ್ಟು ಈರೀತಿ ಬಾಯಿಗೆ ಬಂದದ್ದನ್ನೆಲ್ಲ ಮಾತನಾಡಿ ಈಗ ನಿಮ್ಮ ಬಳಿ ಉಳಿದಿರುವ ಅಲ್ಪ ಸ್ವಲ್ಪ ಗೌರವವನ್ನು ಕಳೆದು ಕೊಳ್ಳಬೇಡಿ!

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X