ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

Date:

Advertisements

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ್ದ ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ತಂಡದ 265 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯವರ ಆಕರ್ಷಕ ಅರ್ಧಶತಕದ ನೆರವಿನಿಂದ 48.1 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 267 ರನ್ ದಾಖಲಿಸುವ ಮೂಲಕ ಫೈನಲ್ ಪ್ರವೇಶಿಸಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ‌ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದಿದ್ದ ಆಸೀಸ್ ತಂಡ, ನಾಯಕ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿಯವರ ಅರ್ಧಶತಕದ ನೆರವಿನಿಂದ 49.3 ಓವರ್‌ಗಳಲ್ಲಿ 264 ರನ್ ಗಳಿಸುವಷ್ಟರಲ್ಲಿ ಸ್ಪಿನ್ ದಾಳಿಗೆ ನಲುಗಿ ಆಲೌಟ್ ಆಗಿತ್ತು.

Advertisements

ಆಸ್ಟ್ರೇಲಿಯಾ ನೀಡಿದ್ದ ಗುರಿಯನ್ನು ಬೆನ್ನಟ್ಟಲು ಹೊರಟ ಟೀಮ್ ಇಂಡಿಯಾಗೆ ಆರಂಭದಲ್ಲೇ ಆರಂಭಿಕ ಆಟಗಾರರಾದ ಶುಭಮನ್ ಹಾಗೂ ನಾಯಕ ರೋಹಿತ್ ಶರ್ಮಾ ಬೇಗನೆ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಜೊತೆಯಾದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ 91 ರನ್‌ಗಳ ಜೊತೆಯಾಟ ನಡೆಸಿದರು.

45 ರನ್‌ ಗಳಿಸಿದ್ದಾಗ ಶ್ರೇಯಸ್ ಅಯ್ಯರ್, ಝಾಂಪಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು.‌ ಬಳಿಕ ಕ್ರೀಸ್‌ಗೆ ಬಂದ ಅಕ್ಸರ್ ಪಟೇಲ್, 27 ರನ್ ಗಳಿಸಿ ಔಟಾದರು.‌ 84 ರನ್ ಗಳಿಸಿ ಶತಕ ಬಾರಿಸಲು ಯತ್ನಿಸುತ್ತಿದ್ದ ಕೊಹ್ಲಿ, ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾದ್ದರಿಂದ ಕ್ಯಾಚಿತ್ತು ಔಟಾದರು.

ಕೊನೆಯಲ್ಲಿ ಜೊತೆಯಾಟ ನಡೆಸಿದ ಕೆ ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯಾ ಗೆಲುವಿನತ್ತ ಕೊಂಡೊಯ್ದರು. ಗೆಲುವಿಗೆ 6 ರನ್ ಬೇಕಿದ್ದಾಗ ಹಾರ್ದಿಕ್ ಪಾಂಡ್ಯಾ, ಕ್ಯಾಚ್ ನೀಡಿ ಔಟಾದರು. ಔಟಾಗುವುದಕ್ಕೂ ಮುನ್ನ 24 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸ್‌ನ ನೆರವಿನಿಂದ 28 ರನ್ ಗಳಿಸಿದರು.‌ ಸಮಾಧಾನ ಚಿತ್ತದಿಂದ ಬ್ಯಾಟಿಂಗ್ ನಡೆಸಿದ ಕೆ ಎಲ್ ರಾಹುಲ್, 42 ರನ್ ಗಳಿಸುವ ಮೂಲಕ ಔಟಾಗದೇ ಉಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X