ತಿಪಟೂರು | ಅರಣ್ಯ ಇಲಾಖೆ ಎಡವಟ್ಟು; ಆಕಸ್ಮಿಕ ಅಗ್ನಿ ಅವಘಡಕ್ಕೆ ಬಲಿಯಾದ ಚಿರತೆ

Date:

Advertisements

ಅರಣ್ಯ ಇಲಾಖೆಯ ಎಡವಟ್ಟಿನಿಂದ ಆಕಸ್ಮಿಕ ಅಗ್ನಿ ಅವಘಡಕ್ಕೆ ಚಿರತೆಯೊಂದು ಬಲಿಯಾದ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಗ್ರಾಮದ ಸ.ನಂ. 10ರಲ್ಲಿ ನಾರಾಯಣಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು. ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೇನೋ ಸೆರೆಯಾಗಿದೆ. ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೋನಿನಲ್ಲಿದ್ದ ಚಿರತೆ ಉಸಿರುಗಟ್ಟಿ ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದೆ.

ಇನ್ನು ಚಿರತೆ ಸೆರೆಗೆಂದೇ ಬೋನ್‌ ಅಳವಡಿಸಿ, ಬಳಿಕ ಚಿರತೆ ಬೋನಿಗೆ ಸೆರೆಯಾಯಿತೇ ಇಲ್ಲವೇ ಎನ್ನುವುದನ್ನು ಮರೆತ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಬೇಜವಾಬ್ದಾರಿ ನಡೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements
WhatsApp Image 2025 03 05 at 11.19.41 AM

ಇದನ್ನೂ ಓದಿ: ತಿಪಟೂರು | ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ಕೇಂದ್ರ ಸಚಿವ ವಿ. ಸೋಮಣ್ಣ

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಚಿರತೆ ಕಳೇಬರ ವಿಲೇವಾರಿ ಮಾಡಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X