ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Date:

Advertisements

ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ.

ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Advertisements

ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X