‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

Date:

Advertisements

ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ 45ನೇ ‘ಯುರೋಪಿಯನ್ ಎಸ್ಸೇ ಪ್ರೈಜ್’ ನೀಡಲಾಗುತ್ತದೆ ಎಂದು ಚಾಲ್ಸ್ ವೈಲನ್ ಫೌಂಡೇಷನ್ ಪ್ರಕಟಿಸಿದೆ.

‘ಆಜಾದಿ’(2021) ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಕಲನದ ಪ್ರೆಂಚ್‌ ಅನುವಾದಕ್ಕಾಗಿ ಅರುಂಧತಿ ರಾಯ್ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ಫೌಂಡೇಷನ್‌ ತಿಳಿಸಿದೆ.

“ಆಜಾದಿ” ಸಂಕಲನದಲ್ಲಿ ರಾಯ್‌ ಅವರು ‘ಬೆಳೆಯುತ್ತಿರುವ ನಿರಂಕುಶವಾದ’ದ ಜಗತ್ತಿನಲ್ಲಿ ಸ್ವಾತಂತ್ರ್ಯದ ಅರ್ಥವನ್ನು ಪ್ರತಿಬಿಂಬಿಸಿದ್ದಾರೆ. ಅಲ್ಲದೆ ಈ ಪ್ರಬಂಧಗಳು ಪ್ರಸ್ತುತ ಕಾಲದಲ್ಲಿ ಕಾಲ್ಪನಿಕ ಮತ್ತು ಪರ್ಯಾಯ ಕಲ್ಪನೆಗಳ ಪಾತ್ರದ ಕುರಿತ ಹಲವು ಚಿಂತನೆಗಳನ್ನು ಒಳಗೊಂಡಿವೆ. ಫ್ಯಾಸಿಸಂ ಮತ್ತು ಅದರ ರಚನೆಯ ವಿಶ್ಲೇಷಣೆ. ಇದು ಹೇಗೆ ನಮ್ಮ ಜೀವನವನ್ನು ಹೆಚ್ಚು ಆಕ್ರಮಿಸುತ್ತಿರುವ ಸಮಸ್ಯೆ ಎಂಬುದು ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಒಳಗೊಂಡಿದೆ” ಎಂದು ಫೌಂಡೇಷನ್‌ ಪ್ರಕಟಣೆಯಲ್ಲಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

ದೇಶದ ಪ್ರಸಿದ್ಧ ಲೇಖಕಿಯಾಗಿರುವ ಅರುಂಧತಿ ರಾಯ್ ಅವರ “ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್”, “ದಿ ಮಿನಿಸ್ಟ್ರಿ ಆಫ್ ಅಟ್ಮೋಸ್ಟ್ ಹ್ಯಾಪಿನೆಸ್” ಮತ್ತು “ಮೈ ಸೆಡಿಟಿಯಸ್ ಹಾರ್ಟ್” ಸೇರಿದಂತೆ ಹಲವು ಕೃತಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿವೆ.

ಸ್ವಿಟ್ಜರ್ಲೆಂಡ್‌ನ ಲುಸಾನ್ ನಗರದಲ್ಲಿ ಸೆಪ್ಟೆಂಬರ್ 12ರಂದು ನಡೆಯುವ ಸಮಾರಂಭದಲ್ಲಿ ಅಂದಾಜು ₹ 18 ಲಕ್ಷ ಮೊತ್ತದೊಂದಿಗೆ ಪ್ರಶಸ್ತಿಯನ್ನು ರಾಯ್ ಅವರು ಸ್ವೀಕರಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X