ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್

Date:

Advertisements

ಭಾರತ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾದ ನಾಯಕ ಸ್ಟೀವ್‌ ಸ್ಮಿತ್‌ ಅವರು ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್, ಇನ್ನು ಮುಂದೆ ಟೆಸ್ಟ್ ಹಾಗೂ ಟಿ-20 ಮಾದರಿಗಳಲ್ಲಿ ಮುಂದುವರಿಯಲಿದ್ದಾರೆ.

2010ರಲ್ಲಿ ಲೆಗ್‌ಸ್ಪಿನ್‌ ಆಲ್‌ರೌಂಡರ್ ಆಗಿ ಏಕದಿನಕ್ಕೆ ಪದಾರ್ಪಣೆ ಮಾಡಿದ್ದ ಅವರು, ಈವರೆಗೆ 170 ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5,800 ರನ್ ಗಳಿಸಿದ್ದಾರೆ. 12 ಶತಕ ಹಾಗೂ 35 ಅರ್ಧಶತಕ ಅವರ ಹೆಸರಿನಲ್ಲಿವೆ. 2015 ಹಾಗೂ 2023ರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರೂ ಆಗಿದ್ದರು.

Advertisements

ದುಬೈನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಮಿತ್ 73 ರನ್ ಗಳಿಸಿದ ಪರಿಣಾಮ ಆಸ್ಟ್ರೇಲಿಯಾ 265 ಸ್ಪರ್ಧಾತ್ಮಕ ಮೊತ್ತ ಗಳಿಸಿತು. ಆದರೆ ವಿರಾಟ್‌ ಕೊಹ್ಲಿ ಅರ್ಧಶತಕ (84) ನೆರವಿನಿಂದ ಭಾರತ 4 ವಿಕೆಟ್ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. ಈ ಸೋಲಿನಿಂದ ಬೇಸತ್ತ ಸ್ಮಿತ್ ತಮ್ಮ 25 ವರ್ಷಗಳ ಏಕದಿನ ಪಯಣಕ್ಕೆ ವಿದಾಯ ಹೇಳಿದ್ದಾರೆ ಎಂದು ವರದಿಯಾಗಿದೆ.

ಟೆಸ್ಟ್ ಕ್ರಿಕೆಟ್ ನ ಫ್ಯಾಬ್ 4ರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟೀವನ್ ಸ್ಮಿತ್ 2015ರ ಏಕದಿನ ಹಾಗೂ 2021ರ ಟ್ವೆಂಟಿ-20 ವಿಶ್ವಕಪ್ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

“ನನ್ನ ವೃತ್ತಿ ಜೀವನದಲ್ಲಿ ಹಲವಾರು ಉತ್ಕೃಷ್ಟ ಆಟಗಾರರೊಂದಿಗೆ ಮೈದಾನ ಹಂಚಿಕೊಂಡಿದ್ದೇನೆ. ಅಲ್ಲದೆ ಎರಡು ವಿಶ್ವಕಪ್ ಗೆದ್ದಿರುವುದು ಸದಾ ನೆನಪಾಗಿರುತ್ತದೆ. ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ಕಲ್ಪಿಸುವ ದೃಷ್ಟಿಯಿಂದಾಗಿ ಏಕದಿನ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳುವ ನಿರ್ಧಾರ ಕೈಗೊಂಡಿದ್ದರೂ, ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಟೆಸ್ಟ್ ಕ್ರಿಕೆಟ್ ನತ್ತ ಸಂಪೂರ್ಣವಾಗಿ ಗಮನಹರಿಸುತ್ತೇನೆ” ಎಂದು ಸ್ಟೀವನ್ ಸ್ಮಿತ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X