ಗುಜರಾತ್ | ಎರಡು ವರ್ಷದಲ್ಲಿ 286 ಸಿಂಹಗಳು, 456 ಚಿರತೆಗಳು ಸಾವು

Date:

Advertisements

ಪ್ರಧಾನಿ ಮೋದಿ ಅವರ ತವರು ರಾಜ್ಯ, ಮಾದರಿ ರಾಜ್ಯದ ಮಾಡೆಲ್ ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ 286 ಸಿಂಹಗಳು ಮತ್ತು 456 ಚಿರತೆಗಳು ಸಾವನ್ನಪ್ಪಿವೆ ಎಂದು ಗುಜರಾತ್‌ ಸರ್ಕಾರ ಹೇಳಿದೆ.

ಗುಜರಾತ್‌ನಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ವನ್ಯಜೀವಿಗಳ ಸಾವಿನ ಬಗ್ಗೆ ಅರಣ್ಯ ಸಚಿವ ಮುಲುಭಾಯಿ ಬೇರಾ ಮಾಹಿತಿ ನೀಡಿದ್ದಾರೆ. “ಗುಜರಾತ್‌ನಲ್ಲಿ ಎರಡು ವರ್ಷಗಳಲ್ಲಿ 143 ಮರಿಗಳು ಸೇರಿದಂತೆ 286 ಸಿಂಹಗಳು ಸಾವನ್ನಪ್ಪಿವೆ. 140 ಮರಿಗಳು ಸೇರಿದಂತೆ 456 ಚಿರತೆಗಳು ಮೃತಪಟ್ಟಿವೆ” ಎಂದು ಹೇಳಿದ್ದಾರೆ.

“2023ರಲ್ಲಿ 121 ಸಿಂಹಗಳು ಮತ್ತು 225 ಚಿರತೆಗಳು ಸಾವನ್ನಪ್ಪಿವೆ. 2024ರಲ್ಲಿ 165 ಸಿಂಹಗಳು ಮತ್ತು 231 ಚಿರತೆಗಳು ಸಾವನ್ನಪ್ಪಿವೆ” ಎಂದು ತಿಳಿಸಿದ್ದಾರೆ.

Advertisements

ಮೃತಪಟ್ಟ 286 ಸಿಂಹಗಳಲ್ಲಿ 228 ಸಿಂಹಗಳು ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದು, 58 ಸಿಂಹಗಳು ವಾಹನಗಳಿಗೆ ಢಿಕ್ಕಿ ಹೊಡೆದು ಅಥವಾ ತೆರೆದ ಬಾವಿಗೆ ಬಿದ್ದು ಮೃತಪಟ್ಟಿವೆ. ಅಂತೆಯೇ, 303 ಚಿರತೆಗಳು ನೈಸರ್ಗಿಕ ಕಾರಣಗಳಿಂದ ಮತ್ತು 153 ಸಾವುಗಳು ಅಸ್ವಾಭಾವಿಕ ಕಾರಣಗಳಿಂದ ಸಾವನ್ನಪ್ಪಿವೆ” ಎಂದು ಸಚಿವರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಹಗರಣಗಳ ಕುಣಿಕೆ, ‘ಮೋಶಾ’ಗಳ ಪಾಶ: ಕುಮಾರಸ್ವಾಮಿಯವರ ಕತೆ ಏನು?

ಸಿಂಹ ಮತ್ತು ಚಿರತೆಗಳ ಅಸ್ವಾಭಾವಿಕ ಸಾವುಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಪಶುವೈದ್ಯರ ನೇಮಕಾತಿ ಮತ್ತು ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ ಸೇವೆಗಳನ್ನು ಆರಂಭಿಸಲಿದೆ. ಅಭಯಾರಣ್ಯ ಪ್ರದೇಶಗಳಲ್ಲಿ ಹಾದುಹೋಗುವ ರಸ್ತೆಗಳಲ್ಲಿ ವೇಗಮಿತಿ, ಸೂಚನಾ ಫಲಕ ಹಾಗೂ ಗಸ್ತು ತಿರುಗುವಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಏಷ್ಯಾ ಪ್ರಬೇಧದ ಸಿಂಹಗಳು ಇಡೀ ಜಗತ್ತಿನಲ್ಲಿ ಗುಜರಾತ್‌ನಲ್ಲಿ ಮಾತ್ರವೇ ಕಂಡುಬರುತ್ತವೆ. ಅದರಲ್ಲೂ, ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಮಾತ್ರವೇ ಇವೆ. ಈ ಪ್ರಬೇಧದ 674 ಸಿಂಹಗಳು ಗುಜರಾತ್‌ನಲ್ಲಿವೆ ಎಂದು 2020ರ ಜೂನ್‌ನಲ್ಲಿ ನಡೆದ ಪ್ರಾಣಿಗಣತಿ ಹೇಳಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X