ರೈತರು-ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಸಚಿವ ಕೆ.ವೆಂಕಟೇಶ್

Date:

Advertisements

ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ವಿಧಾನಪರಿತ್‌ನಲ್ಲಿ ಮಂಗಳವಾರ ತಿಳಿಸಿದ್ದಾರೆ.

ಸದಸ್ಯರಾದ ಉಮಾಶ್ರೀ ಮತ್ತು ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಲಿನ ದರವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ರೈತರಿಂದ ಕೇಳಿ ಬಂದಿದೆ. ಪ್ರತಿ ಲೀಟರ್‌ಗೆ 10 ರೂ. ಹೆಚ್ಚಳ ಮಾಡಬೇಕೆಂದು ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಂಘಗಳು ಸಹಾ ಸಮ್ಮತಿಸಿವೆ” ಎಂದರು.

“ಅಂತಿಮವಾಗಿ ರೈತರು ಮತ್ತು ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಎಷ್ಟು ಸಾಧ್ಯವೋ ಅಷ್ಟು ಬೇಗ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಈಗಾಗಲೇ ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನಕ್ಕೆ ಒಂದು ಕೋಟಿ ಲೀಟರ್‌ಗೆ ಹೆಚ್ಚಳವಾಗಿದೆ. ಹಿಂದೆ 95 ಲಕ್ಷ ಇತ್ತು. ಈಗ ಒಂದು ಕೋಟಿಗೂ ಅಧಿಕವಾಗಿದೆ. ಉತ್ಪಾದನಾ ವೆಚ್ಚವು ಹೆಚ್ಚಾಗುತ್ತಿದೆ. ಇದೆಲ್ಲಾ ಅಂಶಗಳನ್ನು ಪರಿಗಣಿಸಿ ನಾವು ಯಾರಿಗೂ ಹೊರೆಯಾಗದಂತೆ ದರ ಪರಿಷ್ಕರಣೆ ಮಾಡುತ್ತೇವೆ” ಎಂದು ಹೇಳಿದರು.

Advertisements

“ರೈತರಿಗೆ 665.07 ಕೋಟಿ ಬಾಕಿ ಹಣವಿದೆ. ಪ್ರೋತ್ಸಾಹ ಧನ ನೀಡುವುದರಿಂದ ರೈತರಿಗೆ ಅನುಕೂಲವಾಗಲಿದೆ. ಕಳೆದ ಅಕ್ಟೋಬರ್ ತಿಂಗಳಿನಿಂದ ರೈತರ ಖಾತೆಗೆ ಪ್ರೋತ್ಸಾಹ ಹಣ ತಲುಪಿಲ್ಲ. ಹೀಗಾದರೆ ರೈತರು ಏನು ಮಾಡಬೇಕು” ಎಂದು ಸದಸ್ಯರು ಪ್ರಶ್ನಿಸಿದಾಗ, “ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಉತ್ಪಾದನೆಗೆ ತಕ್ಕಂತೆ ಬಜೆಟ್‌ನಲ್ಲಿ ಅನುದಾನವನ್ನು ನಿಗದಿಪಡಿಸಿಲ್ಲ. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು 1300ರಿಂದ 1500 ಕೋಟಿ ರೂ. ಅನುದಾನವನ್ನು ಒದಗಿಸಿದರು. ನಮ್ಮ ಸರ್ಕಾರದ ಅವಧಿಯಲ್ಲಿ ಮಾತ್ರ ಪ್ರೋತ್ಸಾಹ ಹಣ ಬಾಕಿಯಿಲ್ಲ. ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಅವಧಿಯಲ್ಲಿ ಹಾಲಿನ ಪ್ರೋತ್ಸಾಹವನ್ನು ಬಾಕಿ ಉಳಿಸಿಕೊಳ್ಳಲಾಗಿತ್ತು. ಅವರು ಸರಿಯಾಗಿ ಪಾವತಿ ಮಾಡಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ಬಾಕಿ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿದ್ದೇವೆ. ರೈತರಿಗೆ ಬಾಕಿ ಹಣವನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಬಿಡುಗಡೆ ಮಾಡುತ್ತೇವೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X