ದಾವಣಗೆರೆ | ಕ್ರೀಡಾ ಇಲಾಖೆ ಮಳಿಗೆಗಳ ಹರಾಜಿಗೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಜಯಕರ್ನಾಟಕ ಮನವಿ.

Date:

Advertisements

ದಾವಣಗೆರೆ ಜಿಲ್ಲೆ, ಹರಿಹರ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 50 ವಾಣಿಜ್ಯ ಮಳಿಗೆಗಳನ್ನು ಅವಧಿ ಮುಗಿದರೂ ಮರು ಹರಾಜು ಪ್ರಕ್ರಿಯೆ ನಡೆಸದಿರುವ ಕುರಿತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ|| ಕೆ ಗೋವಿಂದರಾಜ್ ರವರಿಗೆ ವಿಧಾನಸೌಧದಲ್ಲಿ ಮನವಿ ನೀಡಲಾಯಿತು.

“ಹರಿಹರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಿಸಿರುವ 50 ವಾಣಿಜ್ಯ ಮಳಿಗೆಗಳನ್ನು ಕರಾರು ಅವಧಿ ಮುಗಿದು ಐದು ವರ್ಷವಾದರೂ ನಿಯಮಾನುಸಾರ ಮರು ಹರಾಜು ಪ್ರಕ್ರಿಯೆ ನಡೆಸಿಲ್ಲ. ಮತ್ತು ಪರವಾನಿಗೆಗಳನ್ನು ನಗರಸಭೆಯಿಂದ ನವೀಕರಿಸಿಕೊಳ್ಳದೆ ಅನದಿಕೃತ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಕ್ರೀಡಾಂಗಣದ ಮಳಿಗೆಗಳಲ್ಲಿ ಮಧ್ಯದ ಅಂಗಡಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಜಯಕರ್ನಾಟಕ ಸಂಘಟನೆ ಮುಖಂಡ ಗೋವಿಂದ “ಮರು ಹರಾಜು ನಡೆಸುವಂತೆ ಜಯಕರ್ನಾಟಕ ಸಂಘಟನೆಯಿಂದ ಹರಿಹರದಲ್ಲಿ 152 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಮಾಡುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮಧ್ಯೆ ಪ್ರವೇಶಿಸಿ ಕ್ರೀಡಾಂಗಣದ ಆವರಣದಲ್ಲಿರುವ ಮಧ್ಯದ ಅಂಗಡಿಯನ್ನು ತೆರವುಗೊಳಿಸಿ, ನಿಯಮಾನುಸಾರ ಎಲ್ಲಾ ಮಳೆಗೆಗಳನ್ನು ಮರು ಹರಾಜು ಪ್ರಕ್ರಿಯೆ ನಡೆಸುವಂತೆ ಮನವಿ ನೀಡಿ ಒತ್ತಾಯಿಸಲಾಯಿತು” ಎಂದು ಮಾಹಿತಿ ನೀಡಿದರು.

Advertisements

“ಇದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ|| ಕೆ ಗೋವಿಂದ್ ರಾಜ್ ರವರು ತಕ್ಷಣವೇ ಸಂಬಂಧಪಟ್ಟ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಆಯುಕ್ತರಾದ ಆರ್ ಚೇತನ್ ರವರನ್ನು ಸ್ಥಳಕ್ಕೆ ಕರೆಯಿಸಿ ಕೂಡಲೇ ಮಧ್ಯದ ಅಂಗಡಿಯನ್ನ ತೆರೆವುಗೊಳಿಸಲು ಸೂಚನೆ ನೀಡಿದರು.‌ ನಿಯಮನುಸಾರ ಹರಾಜು ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹೊಯ್ಸಳ ವಾಹನದ ಕೀ ಕಸಿದು ಸಚಿವರ ಬೆಂಬಲಿಗರ ಪುಂಡಾಟ.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ರಾಜ್ಯ ಅಧ್ಯಕ್ಷರು ಡಾ||ಬಿ ಎನ್ ಜಗದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಜಪೂತ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಕಲಬುರ್ಗಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಸಾರವಾಡ, ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸಿ ಹೆಚ್, ಹಾಗೂ ಇನ್ನಿತರರು ಹಾಜರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X