‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

Date:

Advertisements

‘ಗೃಹಜ್ಯೋತಿ’ ಯೋಜನೆಯ ಸೌಲಭ್ಯ ಪಡೆಯುವಲ್ಲಿ ಉಂಟಾಗಿರುವ ಗೊಂದಲಗಳಿಗೆ ಇಂಧನ ಇಲಾಖೆ ಸ್ಪಷ್ಟನೆ ನೀಡಿದೆ.

ಬಾಡಿಗೆದಾರರು ಮತ್ತು ಇತರೆ ಗ್ರಾಹಕರು ಗೃಹಜ್ಯೋತಿ ಯೋಜನೆಯ ಫಲಾನುಭವಿಯಾಗಲು ಆಧಾರ್‌ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ತಿಳಿಸಿದೆ.

ಗೊಂದಲ-1

Advertisements

ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ವಿದ್ಯುತ್ ಬಳಕೆದಾರರಿಗೂ ಅನ್ವಯವಾಗುವುದೇ?

ಸ್ಪಷ್ಟೀಕರಣ

ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಈ ಸೌಲಭ್ಯ ಪಡೆಯಬಹುದಾಗಿದೆ.

ಗೊಂದಲ-2

ಗೃಹ ಬಳಕೆದಾರರು / ಫಲಾನುಭವಿಗಳು ಯಾವುದಾದರೂ ಮಾಹೆಗಳಲ್ಲಿ ಮಾತ್ರ 200 ಯುನಿಟ್‌ ಮಿತಿ ದಾಟಿದರೂ, ಸದರಿ ಯೋಜನೆಯಲ್ಲಿ ಮುಂದುವರಿಯುವವರೆ?

ಸ್ಪಷ್ಟೀಕರಣ

200 ಯುನಿಟ್‌ಗಳ ಬಳಕೆಯ ಮಿತಿಯನ್ನು ಯಾವುದಾದರೂ ತಿಂಗಳಲ್ಲಿ ಮೀರಿದಲ್ಲಿ, ಆ ತಿಂಗಳ ಪೂರ್ಣ ವಿದ್ಯುತ್‌ ಬಿಲ್‌ ಅನ್ನು ಪಾವತಿಸಿ, ಸದರಿ ಯೋಜನೆಯಲ್ಲಿ ಮುಂದುವರಿಯುವುದು.

ಗೊಂದಲ-3

ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್‌ ಸಂಪರ್ಕ ಪಡೆದ ಗ್ರಾಗಕರಿಗೆ / ಬಳಕೆದಾರರಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

ಸ್ಪಷ್ಟೀಕರಣ

ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯ ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಗೊಂದಲ-4

2022-23ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ, ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ? (Shifted House)

ಸ್ಪಷ್ಟೀಕರಣ

ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆಯ ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಗೊಂದಲ-5

Multi store Apartment ಗಳಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

ಸ್ಪಷ್ಟೀಕರಣ

ಯಾವ ಮನೆಗಳಿಗೆ ಪ್ರತ್ಯೇಕ ಮೀಟರ್‌ ಇದೆಯೋ ಹಾಗೂ ಮೀಟರ್‌ ರೀ‌ಡಿಂಗ್‌ ಮಾಡಲಾಗುತ್ತದೆಯೋ ಅಂತಹ ಎಲ್ಲ ಮನೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.

ಗೃಹಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯ ನೋಂದಣಿ ಇದೇ 18ರಿಂದ ಆರಂಭವಾಗಲಿದೆ. ಈ ಯೋಜನೆಯ ಲಾಭ ಪಡೆಯಲು ಇಚ್ಛಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/gruhajyothi ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X