ತಮಿಳುನಾಡು | ಸರ್ಕಾರ-ರಾಜ್ಯಪಾಲರ ನಡುವಿನ ತಿಕ್ಕಾಟಕ್ಕೆ ಕಾರಣವಾದ ಸೆಂಥಿಲ್‌ ಬಾಲಾಜಿ ಬಂಧನ

Date:

Advertisements
  • ಉದ್ಯೊಗ ಹಗರಣದಲ್ಲಿ ಮೇ 31 ರಂದು ಸೆಂಥಿಲ್‌ ಬಾಲಾಜಿ ಬಂಧನ
  • ಜೂನ್‌ 23 ರಂದು ಸೆಂಥಿಲ್‌ರನ್ನು ಹಾಜರುಪಡಿಸುವಂತೆ ಸೂಚನೆ

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧನ ಹಾಗೂ ಸಚಿವರಾಗಿ ಮುಂದುವರಿಯುವ ವಿಚಾರ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ಅವರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಸೆಂಥಿಲ್‌ ಅವರ ಖಾತೆಗಳ ಮರುಹಂಚಿಕೆ ಕುರಿತು ಗುರುವಾರ (ಜೂನ್‌ 15) ಆರ್‌.ಎನ್‌.ರವಿ ಅವರಿಗೆ ಶಿಫಾರಸು ಮಾಡಿದ್ದರು.

“ಸೆಂಥಿಲ್‌ ಬಾಲಾಜಿ ಅವರು ಅಪರಾಧ ಮೊಕದ್ದಮೆಗಳನ್ನು ಎದುರಿಸುತ್ತಿದ್ದು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವುದರಿಂದ ಇನ್ನು ಮುಂದೆ ಸಂಪುಟದ ಸಚಿವರಾಗಿ ಮುಂದುವರಿಯಲು ರಾಜ್ಯಪಾಲ ರವಿಯವರು ಒಪ್ಪಿಗೆ ನೀಡಿಲ್ಲ” ಎಂದು ರಾಜಭವನ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

Advertisements

ಇದಕ್ಕೆ ಕಿಡಿಕಾರಿರುವ ಡಿಎಂಕೆ, “ರಾಜ್ಯಪಾಲ ರವಿ ಅವರು ಬಿಜೆಪಿಯ ಒಬ್ಬ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ” ಎಂದು ಹೇಳಿದೆ.

“ವಿದ್ಯುತ್, ಇಂಧನ ಅಭಿವೃದ್ಧಿ ಖಾತೆಗಳನ್ನು ಹಣಕಾಸು ಮತ್ತು ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ತಂಗಂ ತೆನ್ನರಸು ಮತ್ತು ಅಬಕಾರಿ ಇಲಾಖೆಯನ್ನು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್‌.ಮುತ್ತುಸ್ವಾಮಿ ಅವರಿಗೆ ಮರು ಹಂಚಿಕೆ ಮಾಡುವ ಮುಖ್ಯಮಂತ್ರಿ ಶಿಫಾರಸನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ.

ಸ್ಟಾಲಿನ್‌ ಸರ್ಕಾರ ಕಳುಹಿಸಿದ ಅನೇಕ ಮಸೂದೆಗಳನ್ನು ಅಂಗೀಕರಿಸಲು ರಾಜ್ಯಪಾಲ ರವಿ ಅವರು ವಿಳಂಬ ಮಾಡುತ್ತಿರುವುದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಆಂತರಿಕ ತಿಕ್ಕಾಟಕ್ಕೆ ಕಾರಣವಾಗಿದೆ.

ಸೆಂಥಿಲ್‌ ಅವರನ್ನು ಉದ್ಯೋಗ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಮೇ 31 ರಂದು ಬಂಧಿಸಿದೆ. ಸೆಂಥಿಲ್‌ ಅವರನ್ನು ಜೂನ್‌ 28ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಆರೋಪಿಯೊಂದಿಗೆ ರಾಜಿಗೆ ಮುಂದಾದ ಗುಜರಾತ್‌ ಹೈಕೋರ್ಟ್‌ ನ್ಯಾಯಾಧೀಶ

ಸೆಂಥಿಲ್ ಬಾಲಾಜಿ ಅವರು ಸದ್ಯ ಶಸ್ತ್ರಚಿಕಿತ್ಸೆ ಸಂಬಂಧ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿಯೇ ಸೆಂಥಿಲ್‌ ವಿಚಾರಣೆ ನಡೆಸಲು ಚೆನ್ನೈ ನ್ಯಾಯಾಲಯ 8 ದಿನಗಳ ಕಾಲಾವಕಾಶ ನೀಡಿದೆ.

ಸೆಂಥಿಲ್‌ ಅವರನ್ನು ಜೂನ್‌ 23 ರಂದು ಹಾಜರುಪಡಿಸಲು ನ್ಯಾಯಾಲಯ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X