ಕಲಬುರಗಿ | ಡಾ ಅಜಯಸಿಂಗ್‌, ಡಿಕೆಶಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಸಜ್ಜು

Date:

Advertisements

ಕೆಬಿಜೆಎನ್‌ಎಲ್ ಬೋರ್ಡ್‌ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್‌ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ತೀರ್ಮಾನಿಸಿದೆ ಎಂದು ಸಮಿತಿ ಸದಸ್ಯ ಡಾ. ಮಹೇಶಕುಮಾರ್ ರಾಠೋಡ್ ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕಳೆದ ನಾಲ್ಕು ದಶಕದ ಹೋರಾಟದ ಪ್ರತಿಫಲವಾಗಿ ಆರಂಭಗೊಂಡಿರುವ ಮಲ್ಲಾಬಾದ ಏತ ನೀರಾವರಿ ಯೋಜನೆಯ ಕಾಮಗಾರಿ ಸರ್ಕಾರದ ಅಧಿಕಾರಿಗಳ ಹಾಗೂ ಶಾಸಕರ ಬೇಜವಾಬ್ದಾರಿತನದಿಂದಾಗಿ ಸ್ಥಗಿತಗೊಂಡಿತ್ತು. ಸ್ಥಗಿತಗೊಂಡಿರುವ ಮಲ್ಲಾಬಾದ್ ಏತ ನೀರಾವರಿ ಕಾಮಗಾರಿಗಳ ಟೆಂಡರ್ ಕರೆದು ಕೆಲಸ ಪ್ರಾರಂಭಿಸ‌ಬೇಕೆಂದು ನಡೆಸಿದ ನಿರಂತರ ಹೋರಾಟ ಮಾಡಲಾಗಿದೆ. ಇದರ ಪ್ರತಿಫಲವಾಗಿ 202324ನೇ ಸಾಲಿನ ದರಗಳಂತೆ ಮಲ್ಲಾಬಾದ ಏತ ನೀರಾವರಿಯ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹327 ಕೋಟಿ ರೂಪಾಯಿಗಳ ಅನುಮೋದನೆ ದೊರೆತಿದೆ. ಆದರೂ ಪ್ರಸ್ತುತ ಸರ್ಕಾರ ಕಾಮಗಾರಿ ಪ್ರಾರಂಭಿಸದೆ ವಿಳಂಬ ನೀತಿ ಅನುಸರಿಸಿದ್ದಕ್ಕಾಗಿ ಈಗ ಅದೇ ಕೆಲಸಕ್ಕೆ ₹359.67 ಕೋಟಿ ರೂಪಾಯಿಗಳು ಬೇಕಾಗಿದೆ. ಅಧಿಕಾರಿಗಳ ಮತ್ತು ಶಾಸಕರ ನಿರ್ಲಕ್ಷ್ಯದಿಂದ ಸರ್ಕಾರದ ‌ಬೊಕ್ಕಸಕ್ಕೆ ಹೆಚ್ಚುವರಿಯಾಗಿ ₹32.67 ಕೋಟಿ ಹೊರೆಯಾಗಿದೆ” ಎಂದರು.

“ಮಾರ್ಚ್ 8ರಂದು ಜೇವರ್ಗಿಗೆ ಆಗಮಿಸುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ ಅವರು ಕೆಬಿಜೆಎನ್‌ಎಲ್‌ ಬೋರ್ಡ್‌ ಸಭೆಯ ನಡಾವಳಿಗಳನ್ನು ಮತ್ತು ಮಲ್ಲಾಬಾದ ಏತ ನೀರಾವರಿ ಯೋಜನೆ ವ್ಯಾಪ್ತಿಯ ಬಾಕಿ ಕಾಮಗಾರಿಗಳ ಟೆಂಡ‌ರ್ ಆದೇಶ ಪ್ರತಿಗಳನ್ನು ಮಲ್ಲಾಬಾದ ಏತ ನೀರಾವರಿ ಹೋರಾಟ ಸಮಿತಿಯ ನಿಯೋಗದೊಂದಿಗೆ ಸಭೆ ನಡೆಸಿ ರೈತ ಹೋರಾಟಗಾರರಿಗೆ ಕೊಡಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲಾದ್ಯತ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

“ಜೇವರ್ಗಿ ತಹಶೀಲ್ದಾರರು ಮದ್ಯಪ್ರವೇಶ ಮಾಡಿ ನಿರಾವರಿ ಸಚಿವರ ಜತೆಗೆ ರೈತರ ನಿಯೋಗದ ಮಾತುಕತೆಗೆ ಅವಕಾಶ ಮಾಡಿಕೊಡಬೇಕು. ಒಂದು ವೇಳೆ ಸದರಿ ಆದೇಶ ಪ್ರತಿಗಳನ್ನು ತರದೇ ಮಲ್ಲಾಬಾದ ಏತ ನೀರಾವರಿ ಹೋರಾಟ ಸಮಿತಿಯ ಮೂಲಕ ನಡೆಸಲಾಗುತ್ತಿರುವ ರೈತ ಹೋರಾಟವನ್ನು ಕಡೆಗಣಿಸಿ ಜೇವರ್ಗಿ ಮತ ಕ್ಷೇತ್ರದ ರೈತರಿಗೆ ಮತ್ತು ರೈತ ಹೋರಾಟಕ್ಕೆ ನಿರ್ಲಕ್ಷ್ಯ ಮಾಡಿದರೆ, ಇದೇ ತಿಂಗಳು ಮಾರ್ಚ್ 08ರಂದು ಜೇವರ್ಗಿಗೆ ಆಗಮಿಸುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರೂ ಆದ ಡಿ ಕೆ ಶಿವಕುಮಾರ್‌ ಮತ್ತು ನಮ್ಮ ಕ್ಷೇತ್ರದ ರೈತರ ಅಭಿವೃದ್ಧಿ ಕಡೆಗಣಿಸುತ್ತಿರುವ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಡಾ. ಅಜಯಸಿಂಗ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಸುದ್ದಿ ಗೋಷ್ಠಿಯಲ್ಲಿ ಬಾಬು ಬಿ ಪಾಟೀಲ್, ಇಬ್ರಾಹಿಂ ಪಟೇಲ್ ಯಾಳವಾರ, ಮಾಂತಗೌಡ ನಂದಿಹಳ್ಳಿ, ಮಹಮ್ಮದ್ ಚೌದ್ರಿ ಕೊಡಚಿ,‌ ಬಿ ಎಸ್ ಮಾಲಿಪಾಟಿಲ್, ರಾಜಾ ಪಟೇಲ್ ಯಾಳವಾರ, ಗುರನಾಥ ಸಾಹು ರಾಜವಾಳ, ವಜೀರ ಪಟೇಲ ಸಿಗರತಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X