ಕಲಬುರಗಿ | ಮದ್ಯ ಕುಡಿದು ಶಾಲೆಯಲ್ಲಿ ಮಲಗಿದ್ದ ಮುಖ್ಯಶಿಕ್ಷಕ ಅಮಾನತು

Date:

Advertisements

ಮದ್ಯ ಕುಡಿದು ಶಾಲೆಗೆ ಬಂದು ಶಾಲೆಯಲ್ಲೇ ಮಲಗಿದ್ದ ಆರೋಪ ಹಿನ್ನೆಲೆ ಕಾಳಗಿ ತಾಲ್ಲೂಕಿನ ಸಾಸರಗಾಂವ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಂಚೋಳಿ ಬಿಇಒ ವಿ.ಲಕ್ಷ್ಮಯ್ಯ ಗುರುವಾರ ಆದೇಶಿಸಿದ್ದಾರೆ.

ಶಿಕ್ಷಕ ಶಂಕರ ರಾಠೋಡ್‌ ಅವರು ಬುಧವಾರ (ಮಾ.5) ರಂದು ಮಧ್ಯಾಹ್ನ ಮದ್ಯ ಸೇವಿಸಿ ಶಾಲೆಗೆ ಬಂದಿದ್ದರು. ಶಾಲಾ ಕಚೇರಿಯಲ್ಲೇ ಮಲಗಿದ್ದನ್ನು ಪ್ರಶ್ನಿಸಿದ ಪೋಷಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ನಿತ್ಯ ಶಾಲಾ ಸಮಯ ಪಾಲಿಸುವುದಿಲ್ಲ. ಅಂದು ಮಧ್ಯಾಹ್ನ ಮಕ್ಕಳಿಗೆ ಬಿಸಿಯೂಟ ವಿತರಿಸಿರುವುದಿಲ್ಲ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ವರದಿ ನೀಡಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ಕಲಬುರಗಿಯ ಹೆಚ್ಚುವರಿ ಆಯುಕ್ತರು ಗುರುವಾರ (ಮಾ.6) ರಂದು ದೂರವಾಣಿ ಮೂಲಕ ಆದೇಶಿಸಿದಂತೆ, ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ (ನಡತೆ)ಗಳ ಉಲ್ಲಂಘನೆ, ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಬಿಇಒ ಆದೇಶದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ ನಕಲಿ ವಿದ್ಯಾರ್ಥಿನಿ ಪೊಲೀಸ್ ವಶಕ್ಕೆ

ಬಿಇಒ ವಿ.ಲಕ್ಷ್ಮಯ್ಯ, ಅಕ್ಷರದಾಸೋಹ ಯೋಜನೆ ಸಹಾಯಕ ನಿರ್ದೇಶಕ ಜಯಪ್ಪ ಚಾಪಲ್, ಸಿಆರ್‌ಪಿ ಶಿವಶರಣಪ್ಪ ಹೊಸಳ್ಳಿ ಗುರುವಾರ ಮಧ್ಯಾಹ್ನ ಶಾಲೆಗೆ ಭೇಟಿ ನೀಡಿ ಪ್ರಭಾರ ಮುಖ್ಯಶಿಕ್ಷಕ ಶಂಕರ ರಾಠೋಡ ಅವರಿಗೆ ಅಮಾನತು ಆದೇಶ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X