ಬಳ್ಳಾರಿ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಸಣ ಕಾರ್ಮಿಕರು, ದೇವದಾಸಿಯರ ಪ್ರತಿಭಟನೆ

Date:

Advertisements

ರಾಜ್ಯದ ದೇವದಾಸಿ ಮಹಿಳೆಯರು ಹಾಗೂ ಮಸಣ ಕಾಯುವ ಕೂಲಿ ಕಾರ್ಮಿಕರ‌ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

“ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ/ಸಹಾಯಧನವನ್ನು 2025ರ ಈ ಬಜೆಟ್‌ನಲ್ಲಿ ಕನಿಷ್ಠ 3000 ರೂಗಳಿಗೆ ಹೆಚ್ಚಿಸಬೇಕು. ಸ್ವಯಂ ಉದ್ಯೋಗದಡಿ ನೀಡಲಾಗುವ ಸಹಾಯಧನವನ್ನು ಕನಿಷ್ಠ 1.50 ಲಕ್ಷ ರೂಗಳಿಗೆ ಹೆಚ್ಚಿಸಲು ಅಗತ್ಯ ಕ್ರಮ ವಹಿಸಬೇಕು. ಉಚಿತ ನಿವೇಶನದ ಜೊತೆ ರಾಜೀವ ಗಾಂಧಿ ವಸತಿ ಯೋಜನೆಯಡಿ ಅಳವಡಿಸಿ ಸುಸಜ್ಜಿತ ಮನೆಯನ್ನು ಕಟ್ಟಿಸಿಕೊಡಲು ಕ್ರಮ ವಹಿಸಬೇಕು. ಇದರಲ್ಲೂ ರಾಜೀವ್ ಗಾಂಧಿ ವಸತಿ ನಿಗಮವು ಈ ದುರ್ಬಲ ಮಹಿಳೆಯರಿಂದ ವಂತಿಗೆಯನ್ನು ತೆಗದುಕೊಳ್ಳುತ್ತಿದೆ. ವಂತಿಗೆ ತೆಗೆದುಕೊಳ್ಳುತ್ತಿರುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಬ್ಯಾಂಕಗಳು ಸಾಲ ಸೌಲಭ್ಯ ಒದಗಿಸಲು ನಿರಾಕರಿಸುತ್ತಿವೆ. ಇಂತ ಕೊರತೆಯನ್ನು ನಿವಾರಿಸಲು ಸರಕಾರವೇ ಈ ಮಹಿಳೆಯರ ಪರವಾಗಿ ವಂತಿಗೆ ನೀಡಲು ಅಗತ್ಯ ಕ್ರಮ ವಹಿಸಬೇಕು” ಎಂದು ಮನವಿ ಮಾಡಿದರು.

WhatsApp Image 2025 03 06 at 8.11.27 PM

ರಾಜ್ಯದ ಮಸಣ ಕಾರ್ಮಿಕರನ್ನು ಗುರುತಿಸಿ ಅವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರವರ್ಗದಡಿ ಶಿಕ್ಷಣದಲ್ಲಿ ಮೀಸಲಾತಿ ಹಾಗೂ ಅವರಿಗೆ ಇತರೆ ಸರ್ಕಾರಿ ಸೌಲಭ್ಯಗಳ ಒದಗಿಸಲು ಕ್ರಮವಹಿಸಿರುವುದು ಸ್ವಾಗತಾರ್ಹ ಹಾಗೂ ಅವರ ಗಣತಿ ಮಾಡಿ ಅವರಿಗೆ ಪೆನ್ನನ್ ಜಾರಿಗೊಳಿಸಬೇಕು. ತಮಗೆ ಸೌಲಭ್ಯಗಳನ್ನು ಒದಗಿಸಬೇಕಾದಲ್ಲಿ ನಮ್ಮ ಕುಟುಂಬದಿಂದ ಸರ್ಕಾರದ ವಿವಿಧ ಇಲಾಖೆಗಳು ನಮ್ಮಿಂದ ‘ನಾವು ಮಸಣ ಕಾರ್ಮಿಕರು’ ಎಂಬುದಕ್ಕೆ ಪ್ರಮಾಣಪತ್ರ ಕೇಳುತ್ತಿವೆ. ಆದ್ದರಿಂದ, ಗಣತಿಗೆ ಕ್ರಮ ವಹಿಸಬೇಕೆಂದು ಒತ್ತಾಯ ಮಾಡಿದರು. ಕನಿಷ್ಟ 45 ವಯೋಮಾನದವರಿಂದ ಮಾಸಿಕ 3000 ಪಿಂಚಣಿಯನ್ನು ಘೋಷಿಸಲು ಮತ್ತು ನಮ್ಮ ಕುಣಿ ತೆಗೆಯುವ ಹಾಗೂ ಶವ ಹೂಳುವ ಕೆಲಸವನ್ನು ಉದ್ಯೋಗ ಖಾತ್ರಿಯಡಿ ತಂದು ಅದನ್ನು ಉದ್ಯೋಗ ಖಾತ್ರಿ ಕೆಲಸವೆಂದು ಪರಿಗಣಿಸಿ, ಸುರಕ್ಷಿತ ಕ್ರಮಗಳನ್ನು ಮತ್ತು ಪರಿಕರಗಳನ್ನು ಒದಗಿಸಲು ಕ್ರಮವಹಿಸಬೇಕೆಂದು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ದುರ್ಗಮ್ಮ,‌ ಯಂಕಮ್ಮ, ಈರಮ್ಮ, ನಾಗವ್ವ‌, ನಾಗರಾಜ್, ಸ್ವಾಮಿ‌ ವಿಕಾಸ, ಹುಲಗವ್ವ,‌ ಯಮನೂರಪ್ಪ, ದುರ್ಗಪ್ಪ ಹಾಗೂ ಹಲವರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X