ಉಡುಪಿ‌ | ಛಲವಾದಿಯವರು ತಮ್ಮ ಕೆಟ್ಟ ಮನಸ್ಥಿತಿಗೆ ಸಿದ್ದರಾಮಯ್ಯರವರಲ್ಲಿ ಕ್ಷಮೆ ಯಾಚಿಸಲಿ – ರಮೇಶ್ ಕಾಂಚನ್

Date:

Advertisements

ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್ ಚೇರ್ ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಾಲಿಗೆ ಹರಿಬಿಟ್ಟಿರುವುದು ಅವರ ಕೀಳು ಮಾನಸಿಕತೆಯನ್ನು ತೋರಿಸುತ್ತದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು ಈ ದೇಶ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಎಲ್ಲಾ ಸಮುದಾಯ, ಜನಾಂಗದ ಜನರನ್ನು ಸಮಾನವಾಗಿ ಕಾಣುವ,ಸಮ ಸಮಾಜ ಕಟ್ಟುವ ಧ್ಯೇಯವನ್ನು ಹೊಂದಿಕೊಂಡು ಅದನ್ನು ಅನುಷ್ಠಾನ ಗೊಳಿಸುವಲ್ಲಿ ಶ್ರಮಿಸುತ್ತಿರುವ ಜನಾದರಣೀಯ ಜನನಾಯಕ. ಆರೋಗ್ಯದ ಸಮಸ್ಯೆ ಕೇವಲ ಸಿದ್ದರಾಮಯ್ಯ ಅವರಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ಬರುವಂತದ್ದು. ಹಾಗೆಂದ ಮಾತ್ರಕ್ಕೆ ಅವರನ್ನು ಹೀಯಾಳಿಸುವುದು ಛಲವಾದಿಯವರ ಸಣ್ಣತನವನ್ನು ತೋರಿಸುತ್ತದೆ. ಮಾನವೀಯತೆ ಇರುವ ಯಾವುದೇ ವ್ಯಕ್ತಿ ಇಂತಹ ಕೀಳು ಮಟ್ಟದ ಮಾತುಗಳನ್ನು ಆಡಲು ಸಾಧ್ಯವಿಲ್ಲ. ಬಿಜೆಪಿಗರಿಗೆ ಇಂತಹ ನೀಚ ಸಂಸ್ಕಾರವನ್ನು ಅವರ ಪಕ್ಷದಲ್ಲಿ ಕಲಿಸುತ್ತಾರೆ ಎನ್ನುವುದಕ್ಕೆ ಛಲವಾದಿಯವರ ಮಾತುಗಳೇ ಸಾಕ್ಷಿ.
ತಾನು ನಾಯಕನಾಗಿ ಬಿಂಬಿಸಿಕೊಳ್ಳಬೇಕು ಎನ್ನುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡಿದರೆ ಮುಂದೊಂದು ದಿನ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತದೆ ಎನ್ನುವುದನ್ನು ಛಲವಾದಿ ನಾರಾಯಣ ಸ್ವಾಮಿ ಮರೆಯಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಡಿನೋವಿನ ವಿಷಯದಲ್ಲಿ ಗೇಲಿ ಮಾಡಿ, ಅವರ ನೋವನ್ನು ಅಪಹಾಸ್ಯ ಮಾಡಿದ್ದು ಸರಿಯಲ್ಲ. ಛಲವಾದಿಯವರ ಇಂತಹ ಕೀಳು ಮನಸ್ಥಿತಿಗೆ ಕೂಡಲೇ ಸಿದ್ದರಾಮಯ್ಯ ಅವರಲ್ಲಿ ಕ್ಷಮೆ ಯಾಚಿಸಲಿ ಎಂದು ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X