ಶಿವಮೊಗ್ಗ | ವಿದ್ಯಾರ್ಥಿನಿಯ ನಗ್ನಚಿತ್ರ ಚಿತ್ರಿಸಿ ಬ್ಲಾಕ್‌ಮೇಲ್; ಎಬಿವಿಪಿ ಅಧ್ಯಕ್ಷನ ಬಂಧನಕ್ಕೆ ಆಗ್ರಹ

Date:

Advertisements

ಕಾಲೇಜು ವಿದ್ಯಾರ್ಥಿಯೊಬ್ಬರ ನಗ್ನಚಿತ್ರವನ್ನು ವಿಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಎಬಿವಿಪಿ ತಾಲೂಕು ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯ ಅಶ್ಲೀಲ ಚಿತ್ರವನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಆರೋಪಿ. ಈತ, ಎಬಿವಿಪಿಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ, ಯುವತಿಯನ್ನು ತನ್ನ ಕಾಮವಾಂಛೆ ತೀರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದ. ಅಲ್ಲದೆ, ಆ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವತಿಯೊಬ್ಬಳೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ್ದ ಕಾಮುಕ ಆರೋಪಿ, ಆಕೆಯನ್ನು ನಗ್ನಳಾಗುವಂತೆ ಒತ್ತಾಯಿಸಿದ್ದಾನೆ. ಬಳಿಕ, ಆಕೆಯ ನಗ್ನ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಆ ವಿಡಿಯೋ ಇಟ್ಟುಕೊಂಡು ಆಕೆಯನ್ನು ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ. ಅಲ್ಲದೆ, ಜೂನ್ 16ರಂದು ಆ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ಧಾನೆ ಎಂದು ತಿಳಿದುಬಂದಿದೆ.

Advertisements

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬಳಿಕ, ಆರೋಪಿ ಪ್ರತಿಗೌಡನನ್ನು ಬಂಧಿಸುವಂತೆ ಎನ್‌ಎಸ್‌ಯುಐ ಸಂಘಟನೆ ಒತ್ತಾಯಿಸಿದ್ದು, ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಿದೆ.

“ಎಬಿವಿಪಿ ತಾಲೂಕು ಅಧ್ಯಕ್ಷ ಎಸಗಿರುವ ಕೃತ್ಯವು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ಆರೋಪಿಯನ್ನು ಬಂಧಿಸಬೇಕು. ಪ್ರಭಾವಿಗಳ ಒತ್ತಡಕ್ಕೆ ಪೊಲೀಸರು ಮಣಿಯಬಾರದು” ಎಂದು ಮನವಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇಂತಹವರನ್ನು ಆದಷ್ಟು ಬೇಗ ಬಂದಿರಿ ಸರಿಯಾದ ಶಿಕ್ಷೆಗೆ ಗುರಿ ಪಡಿಸಬೇಕೆಂಬುದೇ ನನ್ನ ಆಶಯ , ಇಂತವರು ಯಾವ ಸಂಘಟನೆಯವರೇ ಆಗಿರಲಿ ಯಾವ ಪಾರ್ಟಿಯವರೇ ಆಗಿರಲಿ.. ಯಾವ ಜಾತಿಯವರೇ ಆಗಿರಲಿ..

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X