ಎನ್‌ಇಪಿ ಶಿಫಾರಸು ತಿರಸ್ಕರಿಸಿದ ಸರ್ಕಾರ ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ: ಶಿಕ್ಷಣ ತಜ್ಞ ಶ್ರೀಪಾದ ಭಟ್

Date:

Advertisements

ಎನ್‌ಇಪಿ ಶಿಫಾರಸನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರವು ಈಗ ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ ಎಂದು ಶಿಕ್ಷಣ ತಜ್ಞ, ಹಿರಿಯ ಬರಹಗಾರ ಬಿ. ಶ್ರೀಪಾದ ಭಟ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಹಣಕಾಸು ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ “ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ‘ಪ್ರೊಫೆಸರ್ ಆಫ್ ಪ್ರಾಕ್ಟೀಸ್’ (Professor of Practice) ಆಗಿ ನೇಮಿಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | NABARD ಸಹಯೋಗದೊಂದಿಗೆ ಮೈಸೂರಿನಲ್ಲಿ ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ

Advertisements

ಸರ್ಕಾರದ ಈ ನಿರ್ಧಾರವನ್ನು ಶಿಕ್ಷಣ ತಜ್ಞ ಶ್ರೀಪಾದ ಭಟ್ ಖಂಡಿಸಿದ್ದಾರೆ. ‘ಪ್ರೊಫೆಸರ್ ಆಫ್ ಪ್ರಾಕ್ಟೀಸ್’ ಎಂಬುದೇ ಕಾರ್ಪೋರೇಟೀಕರಣ ಮತ್ತು ಬ್ರಾಹ್ಮಣೀಕರಣ. ಈ ಜ್ಞಾನವೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಭಾಷಣದಲ್ಲಿ ’16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು professor of practice ಆಗಿ ನೇಮಕ ಮಾಡಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ. ಅಂದರೆ ಕಾಂಗ್ರೆಸ್ ಸರ್ಕಾರವು ಸಹ ಮೀಸಲಾತಿ ನೀತಿಯನ್ನು ಉಲ್ಲಂಘಿಸುವ ಲ್ಯಾಟ್ರಲ್ ಪ್ರವೇಶವನ್ನು ಪ್ರಾರಂಭಿಸುತ್ತಿದ್ದಾರೆ” ಎಂದಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎನ್ನುವುದೇ ಶಿಕ್ಷಣದ ಕಾರ್ಪೋರೇಟೀಕರಣ ಮತ್ತು ಬ್ರಾಹ್ಮಣೀಕರಣ ಎನ್ನುವ ಸಾಮಾನ್ಯ ತಿಳುವಳಿಕೆಯೂ ಇಲ್ಲವಾಯಿತೇ? ಇದು ಎನ್‌ಇಪಿಯ ಶಿಫಾರಸು. ಅದನ್ನು ತಿರಸ್ಕರಿಸಿದ ಸರ್ಕಾರವು ಅದರ ಆತ್ಮವನ್ನೇ ಜಾರಿಗೊಳಿಸುತ್ತಿದೆ. ಸರ್ಕಾರ ಎಲ್ಲಿಗೆ ಬಂದು ತಲುಪಿದೆ” ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ ಘೋಷಣೆ; ಬಜೆಟ್‌ನಲ್ಲಿ ರಾಜಧಾನಿಗೆ ಬೇರೇನಿದೆ?

ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಎಂದರೆ ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿ ತಜ್ಞರು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಕರಾಗುವುದು. ಪ್ರಾಯೋಗಿಕ ಕೌಶಲ್ಯ ಮತ್ತು ಸೈದ್ಧಾಂತಿಕ ವಿಚಾರಗಳನ್ನು ಪ್ರಸ್ತುತತೆಗೆ ತಕ್ಕುದಾಗಿ ವಿವರಿಸುವ, ಕಲಿಸುವ ಕರ್ತವ್ಯ ಇವರದ್ದಾಗಿರುತ್ತದೆ.

ಆದರೆ ಶಿಕ್ಷಕರಾಗಲು ಅಗತ್ಯವಿರುವ ವಿದ್ಯಾಭ್ಯಾಸವನ್ನು ಪಡೆಯದಿರುವ, ಆ ವಿಷಯದ ಬಗ್ಗೆ ಸಂಶೋಧನೆ ಮಾಡದಿರುವ, ವಿದ್ಯಾರ್ಥಿಗಳಿಗೆ ಭೋದಿಸುವ ಕೌಶಲ್ಯ ತಿಳಿಯದವರನ್ನು ಉಪನ್ಯಾಸಕರನ್ನಾಗಿಸುವುದು ಸರಿಯಲ್ಲ. ಕ್ರಮೇಣ ಇವರೇ ಖಾಯಂ ಉಪನ್ಯಾಸಕರಾಗುವ ಪ್ರಯತ್ನ ಮಾಡಬಹುದು ಎಂಬ ವಾದವಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X