ಮಡಿಕೇರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಬಿಜೆಪಿ ಅಹೋರಾತ್ರಿ ಧರಣಿ

Date:

Advertisements

ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ.

ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಭೇಟಿ ನೀಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿವಿಗಳನ್ನು ಆರಂಭಿಸಿದ್ದು ಬಿಜೆಪಿ ಸರ್ಕಾರ. ಇದೀಗ ಕಾಂಗ್ರೆಸ್‌ ಸರ್ಕಾರ ಅವುಗಳನ್ನು ಕಡೇಪಕ್ಷ ನಿರ್ವಹಣೆ ಮಾಡಲೂ ಆಗದೇ ಮುಚ್ಚಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರ ಎಂದರು.

ನಿನ್ನೆ ಪ್ರತಿಭಟನೆ ಆರಂಭವಾದಾಗ ಮಾತನಾಡಿದ ಮುಖಂಡ ಎಂ ಪಿ ಅಪ್ಪಚ್ಚುರಂಜನ್‌, “ವಿವಿ ಮುಚ್ಚಬಾರದು, ಎಸ್‌, ಎಸ್‌ಟಿ ಅನುದಾನ ದುರ್ಬಳಕೆ ಮಾಡಬಾರದು ಹಾಗೂ ಸರ್ಕಾರಿ ಸ್ವಾಮ್ಯದ ʼಸಿʼ & ʼಡಿʼ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬಾರದು.. ಈ ಮೂರು ಬೇಡಿಕೆಗಳನ್ನು ಕಡ್ಡಾಯವಾಗಿ ಈಡೇರಿಸಬೇಕು. ಇಲ್ಲದಿದ್ದರೆ ಇದೇ ಮಾ.11ರಂದು ಕೊಡಗು ಬಂದ್‌ ಮಾಡಲಾಗುವುದು. ಜತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

ಇದನ್ನೂ ಓದಿ: ಮಡಿಕೇರಿ | ಹೋರಾಟದಿಂದ ಹಿಂದೆ ಸರಿಯುವ ಪ್ರೆಶ್ನೆಯೇ ಇಲ್ಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್

ಪ್ರತಿಭಟನೆಯಲ್ಲಿ ಮುಖಂಡ ಸುನಿಲ್‌ ಸುಬ್ರಮಣಿ, ರಾಬಿನ್‌ ದೇವಯ್ಯ, ಮಹೇಶ್‌ ಜೈನಿ, ಡಾ. ನವೀನ್‌ ಕುಮಾರ್‌, ಉಮೇಶ್‌ ಸುಬ್ರಮಣಿ, ನೆಲ್ಲಿರ ಚೆಲನ್,‌ ರವಿ ಕುಶಾಲಪ್ಪ, ಸತೀಶ್‌, ಪಿಎಂ ರವಿ, ಅನಿತಾ ಪೂವಯ್ಯ, ಸಬಿತಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X