ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಒತ್ತಾಯ

Date:

Advertisements

ಹತ್ತಾರು ವರ್ಷಗಳವರೆಗೆ ದುಡಿಸಿಕೊಂಡು ಸೂಕ್ತ ವೇತನ ನೀಡದೇ ಅನ್ಯಾಯ ಮಾಡಿದ್ದಲ್ಲದೇ, ಕೆಲಸ ಕಾಯಂ ಮಾಡುವ ವೇಳೆ ಅಕ್ರಮ ಎಸಗಿ ಪ್ರಾಮಾಣಿಕವಾಗಿ ದುಡಿದವರು ಬೀದಿಗೆ ಬರುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜೇವರ್ಗಿ ತಾಲ್ಲೂಕು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಹೇಶಕುಮಾರ ರಾಠೋಡ ಆಗ್ರಹಿಸಿದರು.

ಜೇವರ್ಗಿ ಪಟ್ಟಣದ ಪುರಸಭೆ ಕಚೇರಿಯ ಎದುರು ನಡೆಯುತ್ತಿರುವ ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾಗುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ʼಖಾಲಿಯಿರುವ 17 ಪೌರಕಾರ್ಮಿಕರ ಹುದ್ದೆಗಳಿಗೆ ಹಿಂದೆ ಜೇವರ್ಗಿ ಪುರಸಭೆಯಲ್ಲಿ ಕೆಲಸ ಮಾಡಿದ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಈವರೆಗೆ ಕೆಲಸ ಮಾಡಿದ ವೇತನ ಪಾವತಿಸಬೇಕು. ದಲಿತರು ಬದುಕುವ ಹಕ್ಕನ್ನು ಅಧಿಕಾರಿಗಳು ಕಸಿಯುವಂತಹ ದೌರ್ಜನ್ಯ ಎಸಗಿದ್ದು, ಇಂತಹ ಅನ್ಯಾಯ, ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ. ಕೂಡಲೇ ಪೌರಕಾರ್ಮಿಕರಿಗೆ ನ್ಯಾಯ ಸಿಗಬೇಕುʼ ಎಂದು ಒತ್ತಾಯಿಸಿದರು.

Advertisements

ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷೆ ಶಂಕುಬಾಯಿ, ಷಣ್ಮುಖಮ್ಮ ಮತ್ತು ಕಾರ್ಯದರ್ಶಿ ರಾಘವೇಂದ್ರ ಮಾತನಾಡಿ, ʼನಾವು ಅಧಿಕಾರಿಗಳ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿದ್ದೇವೆ. ವೇತನ ದೊರೆಯಲಿ, ದೊರೆಯದೇ ಇರಲಿ.. ನಿಷ್ಠೆಯಿಂದ ಕೆಲಸ ಮಾಡಿದ್ದೇವೆ. ಆದರೆ ಅಧಿಕಾರಿಗಳು ಕೆಲಸ ಕಾಯಂಗೊಳಿಸುತ್ತೇವೆ ಎಂದು ಭರವಸೆ ನೀಡಿ, ಮೋಸ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ. ಶಾಸಕರು ಹಲವು ಬಾರಿ ಭರವಸೆ ನೀಡಿದ್ದರೂ, ನಮಗೆ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಹೀಗಾಗಿ ಪಟ್ಟಣಕ್ಕೆ ಬರುತ್ತಿರುವ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಯುವಜನರಿಗೆ ನಿರಾಸೆ ಮೂಡಿಸಿದ ರಾಜ್ಯ ಬಜೆಟ್ : ಡಿವೈಎಫ್‌ಐ

ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ಬಾಬು ಕೆ. ಮುಲ್ಲಾ, ಎಐಟಿಯುಸಿ ತಾಲ್ಲೂಕು ಕಾರ್ಯದರ್ಶಿ ಅಶೋಕ ಸಾಸಾನೂರ, ಉಗಾರ ಶುಗರ್ ಕಾರ್ಮಿಕರ ಸಂಘದ ಕಾರ್ಯದರ್ಶಿ ವಿಜಯಕುಮಾರ, ಮಡಿವಾಳಪ್ಪ, ನಿತ್ಯಾನಂದ ಹಿರೇಮಠ, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಅಬ್ದುಲ್ ರಶೀದ, ಶಬ್ಬೀರ ಮಡಕಿ, ಸಕ್ರೆಪ್ಪ ಪೂಜಾರಿ, ನಾಗರಾಜ ಮತ್ತು 17 ಪೌರಕಾರ್ಮಿಕರು ಅವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X