ಏಳು ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ; ವೀರೇಂದ್ರ ಸೆಹ್ವಾಗ್ ಸಹೋದರ ಬಂಧನ

Date:

Advertisements

ಭಾರತ ಕ್ರಿಕೆಟ್ ತಂಡದ ಮಾಜಿ ಬಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಏಳು ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸ್ಥಳೀಯ ನ್ಯಾಯಾಲಯವು ವಿನೋದ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಜಲ್ತ ಫುಡ್ ಆಂಡ್ ಬಿವರೇಜಸ್ ಕಂಪನಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಈ ಸಂಸ್ಥೆಯ ನಿರ್ದೇಶಕರುಗಳಾದ ವಿನೋದ್ ಸೆಹ್ವಾಗ್, ವಿಷ್ಣು ಮಿತ್ತಲ್ ಮತ್ತು ಸುಧೀರ್ ಮಲ್ಹೋತ್ರಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಕ್ರಿಕೆಟ್: ವೀರೇಂದ್ರ ಸೆಹ್ವಾಗ್‌ ನಂತರದ ದಾಖಲೆಯ ತ್ರಿಶತಕ ಬಾರಿಸಿದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್‌

Advertisements

ಹಿಮಾಚಲ ಪ್ರದೇಶದ ಶ್ರೀ ನೈನಾ ಪ್ಲಾಸ್ಟಿಕ್ ಫ್ಯಾಕ್ಟರಿಯ ಮಾಲೀಕ ಕೃಷ್ಣ ಮೋಹನ್ ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದಾರೆ. “ದೆಹಲಿಯ ಜಲ್ತ ಫುಡ್ ಆಂಡ್ ಬಿವರೇಜಸ್ ಕಂಪನಿಯು ನಮ್ಮ ಫ್ಯಾಕ್ಟರಿಯಿಂದ ಕೆಲವು ಉತ್ಪನ್ನಗಳನ್ನು ಖರೀದಿಸಿತ್ತು. 7 ಕೋಟಿ ರೂಪಾಯಿಯ ಚೆಕ್ ನೀಡಿತ್ತು. ನಾನು ಬ್ಯಾಂಕ್‌ನಲ್ಲಿ ಈ ಚೆಕ್ ಜಮೆ ಮಾಡಿದಾಗ ಚೆಕ್ ಬೌನ್ಸ್ ಆಗಿದೆ. ನನಗೆ ಸಂಸ್ಥೆ ಪಾವತಿಸಬೇಕಾದ ಹಣ ಪಾವತಿ ಮಾಡದ ಕಾರಣ ನಾನು ದೂರು ನೀಡಿದೆ” ಎಂದು ಕೃಷ್ಣ ಮೋಹನ್ ದೂರಿದ್ದಾರೆ.

ಇನ್ನು 2022ರಲ್ಲಿ ವಿನೋದ್ ಸೆಹ್ವಾಗ್, ವಿಷ್ಣು ಮಿತ್ತಲ್ ಮತ್ತು ಸುಧೀರ್ ಮಲ್ಹೋತ್ರಾ ಅವರನ್ನು ಕೋರ್ಟ್ ಆರ್ಥಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾದವರು (fugitives) ಎಂದು ಘೋಷಿಸಿದೆ. ಮೂವರೂ ಕೂಡಾ ಯಾವುದೇ ವಿಚಾರಣೆಗೆ ಹಾಜರಾಗದೆ ಇದ್ದಾಗ ದೂರು ದಾಖಲಿಸುವಂತೆ 2023ರ ಡಿಸೆಂಬರ್‌ನಲ್ಲಿ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.

ಸದ್ಯ ವಿನೋದ್ ಸೆಹ್ವಾಗ್ ಬಂಧನ ಮಾಡಲಾಗಿದೆ. ವಿನೋದ್ ಜಾಮೀನು ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಮಾರ್ಚ್ 10ರಂದು ನಡೆಯಲಿದೆ. ಈಗಾಗಲೇ ವಿನೋದ್ ವಿರುದ್ಧ 174 ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಈ ಪೈಕಿ 138 ಪ್ರಕರಣದಲ್ಲಿ ವಿನೋದ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X