ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಆರೋಪ; ಪ್ರಕರಣ ದಾಖಲು

Date:

Advertisements

ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಮಾಡಿದ ಆರೋಪದಲ್ಲಿ ಅಯೋಧ್ಯೆಯ ಮಂದಿರವೊಂದರ ಮಾಜಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಯೋಧ್ಯೆಯ ದೇವಾಲಯದ ಮಾಜಿ ಅರ್ಚಕ ಅಕ್ರಮವಾಗಿ ದೇವಾಲಯದ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಹಿನ್ನೆಲೆ ಅವರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರನ್ನು ಆಹ್ವಾನಿಸದ ಮೋದಿ ಸರ್ಕಾರ: ರಾಹುಲ್ ವಾಗ್ದಾಳಿ

Advertisements

ಆರೋಪಿ ಅರ್ಚಕ ರಮಕಾಂತ ಪಾಠಕ್ ಅಕ್ರಮವಾಗಿ 21,198.8 ಚದರ ಮೀಟರ್ ಆನಂದ ಭವನ ಮಂದಿರದ ಭೂಮಿಯನ್ನು ಟ್ರಸ್ಟ್‌ಗೆ ಮಾರಿದ್ದಾರೆ. 2024ರ ಸೆಪ್ಟೆಂಬರ್ 21ರಂದು ಆರು ಕೋಟಿ ರೂಪಾಯಿಗೆ ಈ ಭೂಮಿಯನ್ನು ಅಕ್ರಮ ಮಾರಾಟ ಮಾಡಿದ್ದಾರೆ ಎಂದು ಫರಿದಾಬಾದ್‌ನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರಾಟ ಪತ್ರದಲ್ಲಿ ತಪ್ಪು ಮಾಹಿತಿಯಿತ್ತು ಎಂದು ಹೇಳಲಾಗಿದೆ.

ಆನಂದ ಭವನ ದೇವಾಲಯದ ಸಮಿತಿಯು ಈ ಭೂಮಿಯನ್ನು ರಿಜಿಸ್ಟಾರ್ ಮಾಡಿಕೊಂಡಿದ್ದು, ಯಾವುದೇ ವ್ಯಕ್ತಿಗೂ ಈ ಭೂಮಿಯನ್ನು ಮಾರಾಟ ಮಾಡುವ ಹಕ್ಕಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ರಮಕಾಂತ್ ಪಾಠಕ್ ಅವರನ್ನು 2016ರಲ್ಲೇ ಆನಂದ ಭವನ ದೇವಾಲಯದ ಅರ್ಚಕ ಸ್ಥಾನದಿಂದ ತೆಗೆದುಹಾಕಲಾಗಿತ್ತು. ರಮಕಾಂತ್‌ ಅವರ ಕೆಲವು ವರ್ತನೆಗಳು ಸಂಶಯಾಸ್ಪದವಾಗಿದ್ದ ಕಾರಣದಿಂದಾಗಿ ಅವರನ್ನು ಅರ್ಚಕ ಸ್ಥಾನದಿಂದ ಕೆಳಗಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮೈಕ್ರೋಸ್ಕೋಪು | ಅಯೋಧ್ಯೆ ರಾಮ ಮಂದಿರದಲ್ಲಿ ‘ವಿಜ್ಞಾನ’ ಬಳಕೆ; ನಿಜಕ್ಕೂ ದೇಶದಲ್ಲಿ ಇದೇ ಮೊದಲಾ?

ಇನ್ನು ದೇವಾಲಯದ ಸಮಿತಿಗೆ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಆದರೆ ಪೊಲೀಸರು ಯಾವ ಕ್ರಮವನ್ನು ಕೂಡಾ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

ಬಳಿಕ ದೇವಾಲಯದ ಸಮಿತಿ ಸದಸ್ಯ ಆನಂದ್ ಪ್ರಕಾಶ್ ಪಾಠಕ್ ಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. “ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಚ್‌ಒ ಅಶ್ವಿನಿ ಪಾಂಡೆ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X