ಬೀದರ್ ವಿವಿ ಅಭಿವೃದ್ಧಿಗೆ ಸಿಂಡಿಕೇಟ್ ಸದಸ್ಯರ ಸಹಕಾರ ಅವಶ್ಯ : ಪ್ರೊ.ಬಿ.ಎಸ್.ಬಿರಾದಾರ್

Date:

Advertisements

ಬೀದರ್ ವಿಶ್ವವಿದ್ಯಾಲಯ ಅಭಿವೃದ್ಧಿ ಹೊಂದಬೇಕಾದರೆ ಎಲ್ಲಾ ಸಿಂಡಿಕೇಟ್ ಸದಸ್ಯರ ಸಹಕಾರ ಮಾರ್ಗದರ್ಶನದ ಅವಶ್ಯಕತೆಯಿದೆ. ಎಲ್ಲರ ಸಹಕಾರದೊಂದಿಗೆ ಮಾದರಿ ವಿಶ್ವವಿದ್ಯಾಲಯ ಕಟ್ಟೋಣ ಎಂದು ಬೀದರ್ ವಿವಿ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್ ಹೇಳಿದರು.

ರಾಜ್ಯ ಸರ್ಕಾರ ಬೀದರ ವಿಶ್ವವಿದ್ಯಾಲಯಕ್ಕೆ ನೂತನವಾಗಿ ನೇಮಿಸಿದ ಆರು ಜನ ಸಿಂಡಿಕೇಟ್ ಸದಸ್ಯರು ಶುಕ್ರವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ವರದಿ ಮಾಡಿಕೊಂಡರು.

ನೂತನ ಸಿಂಡಿಕೇಟ್‌ ಸದಸ್ಯರಾದ ಶಿವನಾಥ ಪಾಟೀಲ್ ಮಾಧವರಾವ್ ಪಾಟೀಲ್ (ಸಾಮಾನ್ಯ), ಸಚಿನ್ ಶಿವರಾಜ್ (ಸಾಮಾನ್ಯ), ವಿಠಲ್‌ದಾಸ್‌ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ), ಅರ್ಜುನ್ ಮತೆಪ್ಪ ಕನಕ (ಹಿಂದುಳಿದ ವರ್ಗ), ಅಬ್ದುಲ್ ಸತ್ತಾರ್ ಚಾಂದ್ ಸಾಬ್ (ಅಲ್ಪಸಂಖ್ಯಾತರು) ಹಾಗೂ ವೈಷ್ಣವಿ ಆರ್.ಪಾಟೀಲ್‌ ಅವರು ತಮ್ಮ ಜವಾಬ್ದಾರಿ ವಹಿಸಿಕೊಂಡರು.

Advertisements

ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಬಿ.ಎಸ್.ಬಿರಾದಾರ್‌ ಮಾತನಾಡಿ, ʼನೂತನ ಸದಸ್ಯರ ಆಗಮನದಿಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಶಕ್ತಿ ಬಂದಂತಾಗಿದೆ. ವಿಶಾಲವಾದ 322 ಎಕರೆಯಲ್ಲಿ ವ್ಯಾಪಿಸಿರುವ ಬೀದರ ವಿಶ್ವವಿದ್ಯಾಲಯವು 124 ಕಾಲೇಜುಗಳ ಸಂಯೋಜನೆಯೊಂದಿಗೆ 14 ಸ್ನಾತಕೋತ್ತರ ಪದವಿ ಕೋರ್ಸ್ ಹಾಗೂ 26,000 ವಿದ್ಯಾರ್ಥಿಗಳು ಪ್ರವೇಶ ಪಡೆದಂತಹ ವಿಶ್ವವಿದ್ಯಾಲಯವಾಗಿದೆʼ ಎಂದರು.

ʼವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸೋಣ. ಬೀದರ್ ವಿಶ್ವವಿದ್ಯಾಲಯದ ಸರ್ವಾಂಗೀಣ ವಿಕಾಸಕ್ಕೆ ಬದ್ಧರಾಗಿ ನಮ್ಮ ಜವಾಬ್ದಾರಿಗಳನ್ನು ಅರಿತುಕೊಂಡು ಸರ್ಕಾರದಿಂದ ಅನುದಾನವನ್ನು ಪಡೆದು ಸುವ್ಯಸ್ಥಿತವಾದ ವಿಶ್ವವಿದ್ಯಾಲಯದ ಭೌತಿಕ ಸಂಪನ್ಮೂಲ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣʼ ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್‌ನಲ್ಲಿ ಬೀದರ್ ಜಿಲ್ಲೆಗೆ ಸಿಕ್ಕಿದ್ದೇನು, ಯಾರು ಏನಂದ್ರು?

ಆಡಳಿತ ಕುಲಸಚಿವೆ ಸುರೇಖಾ ಕೆ.ಎ.ಎಸ್ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೋ.ಪರಮೇಶ್ವರ ನಾಯ್ಕ್ ವಂದಿಸಿದರು. ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X