ಉಡುಪಿ | ನೀರು ಪೂರೈಕೆಗೆ ಆಗ್ರಹ; ಖಾಲಿ ಕೊಡ ಹಿಡಿದು ಗ್ರಾ.ಪಂ ಕಚೇರಿಗೆ ಮುತ್ತಿಗೆ

Date:

Advertisements

ಸಮಪರ್ಕವಾಗಿ ಕುಡಿಯುವ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ ನಗರದ ಸಮೀಪ ಇರುವ ಅಂಬಲಪಾಡಿ ಗ್ರಾಮ ಪಂಚಾಯಿತಿ ಕಚೇರಿಗೆ ಶನಿವಾರ ಕಿದಿಯೂರು ದಿಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿ ಕಚೇರಿ ಯೊಳಗೆ ಧರಣಿ ನಡೆಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಓ ಆಗಮಿಸಿ ನೀರಿನ ಸಮಸ್ಯೆ ಪರಿಹರಿಸಿ ಕೊಡುವಂತೆ ಒತ್ತಾಯಿಸಿದ ಗ್ರಾಮಸ್ಥರು, ಕಚೇರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದು ಕೊಂಡರು.

Advertisements

“ಸುಮಾರು 80 ಮನೆಯವರು ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಯವರು ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ” ಪ್ರತಿಭಟನಕಾರರು ದೂರಿದರು.

ಬಳಿಕ ಕಚೇರಿಗೆ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಮತ್ತು ಪ್ರತಿಭಟನಕಾರ ನಡುವೆ ಮಾತಿನ ಚಕಮಕಿ ನಡೆಯಿತು. ಮೂರು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಧಿಕಾರಿಗಳ ಯಡವಟ್ಟು; ಬದುಕಿರುವ ವೃದ್ಧೆಗೆ ಮರಣ ಪ್ರಮಾಣ ಪತ್ರ

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ರಂಜನ್ ಕಿದಿಯೂರು, ಜನಾರ್ದನ ಕಿದಿಯೂರು, ಯತಿರಾಜ್ ಕಿದಿಯೂರು, ದೇವರಾಜ್ ಕಿದಿಯೂರು, ಶಾರದಾ ಪೂಜಾರ್ತಿ, ಸುಮತಿ ಕಿದಿಯೂರು, ಅಂಬಾ, ಗೀತಾ, ವಿಜಯ, ಸತ್ಯವತಿ, ವಿಠಲ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X