ಕೊಪ್ಪಳ | ದೂರದೃಷ್ಟಿ, ಜನಪರ ಬಜೆಟ್: ಜ್ಯೋತಿ ಗೊಂಡಬಾಳ

Date:

Advertisements

ಈ ಬಾರಿ ಮಂಡನೆಯಾದ 2025-26ನೇ ಸಾಲಿನ ರಾಜ್ಯ ಬಜೆಟ್‌, ಪ್ರಗತಿಪರದ ಜತೆಗೆ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.

ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು, “ಸಿದ್ದರಾಮಯ್ಯ ಅವರ 16ನೇ ದಾಖಲೆ ಬಜೆಟ್‌ನಲ್ಲಿ ಕೊಪ್ಪಳ ನಗರದಲ್ಲಿ 100 ಕೋಟಿ ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, 25 ಕೋಟಿ ವೆಚ್ಚದಲ್ಲಿ ಬೂದಗುಂಪಾ ಕುರಿ ಸಂತೆಗೆ ಮೂಲ ಸೌಕರ್ಯ ಜತೆಗೆ ನವಲಿ ಸಮಾನಾಂತರ ಜಲಾಶಯದ ಆಸೆ ಚಿಗುರಿದೆ. ಹೊಸ ಕರ್ನಾಟಕದಲ್ಲಿ ಪಬ್ಲಿಕ್ ಶಾಲೆಗಳು, ಮಕ್ಕಳಿಗೆ ಪೌಷ್ಟಿಕ ಆಹಾರ, ಪತ್ರಕರ್ತರ ಮಾಸಾಶನ, ಶಿಕ್ಷಕರ ಗೌರವಧನ ಹೆಚ್ಚಳ ಮಾಡುವುದರೊಂದಿಗೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ” ಎಂದಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದ ಖಾಲಿ ಇರುವ ಶಿಕ್ಷಕರ ನೇಮಕ, ಜಾನುವಾರುಗಳ ಅಕಾಲಿಕ ಮೃತ್ಯುವಿಗೆ ಪರಿಹಾರದ ಮೊತ್ತ ಹೆಚ್ಚಳ, ಅಕ್ಕ ಸಹಕಾರಿ ಬ್ಯಾಂಕ್ ಸ್ಥಾಪನೆ ಹಾಗೂ ಗೃಹಲಕ್ಷ್ಮೀ ಅದರ ವ್ಯಾಪ್ತಿಗೆ ತರುವುದು ದೊಡ್ಡ ಆರ್ಥಿಕ ಬದಲಾವಣೆಗೆ ಕಾರಣವಾಗಲಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು, ಎಸ್ಸಿಪಿ ಟಿಎಸ್‌ಪಿ ಯೋಜನೆಗೆ 42018 ಕೋಟಿ ರೂ. ಮೀಸಲು, ಬಿಸಿಯೂಟ ಕಾರ್ಯಕರ್ತರ ಗೌರವಧನವನ್ನೂ ಹೆಚ್ಚಳ ಮಾಡಿರುವುದು ಉತ್ತಮ ಕೆಲಸ” ಎಂದು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

Advertisements

ಇದನ್ನೂ ಓದಿ: ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

ಕೊಪ್ಪಳದ ಬಹುತೇಕ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಒಳಗೊಂಡು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿದ್ದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದು ಗ್ಯಾರಂಟಿ ಸಮಿತಿ ಸದಸ್ಯರೂ ಆದ ಜ್ಯೋತಿ ಗೊಂಡಬಾಳ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X