ಬಿಜೆಪಿ ಜೊತೆ ಸೇರಿ ಒಳಸಂಚು ಮಾಡುವವರನ್ನು ತೆಗೆದುಹಾಕಿ: ಗುಜರಾತ್ ಕಾಂಗ್ರೆಸ್‌ ಸಮಿತಿಗೆ ರಾಹುಲ್ ಗಾಂಧಿ ಕರೆ

Date:

Advertisements

ಬಿಜೆಪಿಯೊಂದಿಗೆ ಸೇರಿಕೊಂಡು ಒಳಸಂಚು ನಡೆಸುವವರನ್ನು ಪಕ್ಷದಿಂದ ತೆಗೆದುಹಾಕಿ, ಅವರ ಬಗ್ಗೆ ಎಚ್ಚರಿಕೆ ಹೊಂದಿರಿ ಎಂದು ಗುಜರಾತ್‌ ಕಾಂಗ್ರೆಸ್‌ ಸಮಿತಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಹಾಗೆಯೇ ಇಂತಹ ನಾಯಕರನ್ನು ದೂರ ಮಾಡಿದರೆ ಮಾತ್ರ ಕಾಂಗ್ರೆಸ್ ರಾಜ್ಯದಲ್ಲಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಗುಜರಾತ್‌ನ ಜನರಿಗೆ ನಿಜವಾದ ಪರ್ಯಾಯ ಬೇಕಿದೆಯೇ ಹೊರತು ಬಿಜೆಪಿಯ ಬಿ ಟೀಮ್ ಬೇಕಾಗಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

Advertisements

“ಗುಜರಾತ್‌ನಲ್ಲಿ ಜಿಲ್ಲಾ ಮಟ್ಟದಲ್ಲಿಯೇ ನಾಯಕತ್ವದಲ್ಲಿ ಒಡಕಿದೆ. ಗುಜರಾತ್‌ನಲ್ಲಿ ಎರಡು ರೀತಿಯ ನಾಯಕರಿದ್ದಾರೆ. ಈ ಪೈಕಿ ಒಂದು ವಿಭಾಗದ ನಾಯಕರು ಜನರಿಗಾಗಿ ನಿಲ್ಲುತ್ತಾರೆ. ಅವರ ಹೃದಯದಲ್ಲಿ ಕಾಂಗ್ರೆಸ್ ಸಿದ್ಧಾಂತವಿದೆ. ಇನ್ನೊಂದು ವಿಭಾಗದ ನಾಯಕರು ಜನರಿಂದ ದೂರ ಇರುತ್ತಾರೆ. ಜನರಿಗೆ ಗೌರವವೂ ನೀಡುವುದಿಲ್ಲ. ಈ ಪೈಕಿ ಅರ್ಧದಷ್ಟು ಜನರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಬಿಜೆಪಿಯೊಂದಿಗೆ ನಂಟು ಹೊಂದಿರುವ ಜನರನ್ನು ನಮ್ಮಿಂದ ದೂರ ಮಾಡುವವರೆಗೂ ನಮ್ಮನ್ನು ಜನರು ನಂಬುವುದಿಲ್ಲ. ಗುಜರಾತ್‌ನ ಜನರಿಗೆ, ಉದ್ಯಮಿಗಳಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ, ರೈತರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ವಿರೋಧ ಪಕ್ಷ ಬೇಕಾಗಿದೆ. ಜನರಿಗೆ ಪರ್ಯಾಯ ಬೇಕಿದೆ, ಬಿಜೆಪಿಯ ಬಿ ಟೀಮ್ ಬೇಕಾಗಿಲ್ಲ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಗುಜರಾತ್ | ಎರಡು ವರ್ಷದಲ್ಲಿ 286 ಸಿಂಹಗಳು, 456 ಚಿರತೆಗಳು ಸಾವು

“ನಾವು ಜನರಿಗೆ ಗೌರವ ಕೊಡುವ ಮತ್ತು ಬಿಜೆಪಿಯೊಂದಿಗೆ ನಂಟು ಹೊಂದಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರತ್ಯೇಕ ಮಾಡಬೇಕು. ನಾವು ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯ ಬಂದರೆ ನಾವು ಕನಿಷ್ಠ 30-34 ಜನರನ್ನು ಪಕ್ಷದಿಂದ ತೆಗೆದುಹಾಕಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗಾಗಿ ಕೆಲಸ ಮಾಡುವುದಾದರೆ ಅವರನ್ನು ಪಕ್ಷದಿಂದ ತೆಗೆಯಿರಿ, ಹೊರಗಿದ್ದು ಬಿಜೆಪಿಗಾಗಿ ಕೆಲಸ ಮಾಡಲಿ. ಬಿಜೆಪಿ ಅವರನ್ನು ಒಮ್ಮೆ ಪಕ್ಷಕ್ಕೆ ಸೇರಿಸಿ ಬಳಿಕ ಹೇಗೆ ಕಿತ್ತೆಸಿಯುತ್ತದೆ ಎಂಬುದನ್ನು ನಾವು ನೋಡೋಣ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X