ಮೈಸೂರು | ಅರಮನೆ ಸುತ್ತ ಝೀರೋ ಟ್ರಾಫಿಕ್ ವಲಯ ಜಾರಿಗೆ ಚಿಂತನೆ: ಸಚಿವ ಎಚ್ ಸಿ ಮಹದೇವಪ್ಪ

Date:

Advertisements

ಅರಮನೆಯ ಸುತ್ತಮುತ್ತ ಝೀರೋ ಟ್ರಾಫಿಕ್ ವಲಯವನ್ನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಅರಮನೆಯ ಸುತ್ತಲಿನ 2 ಕಿ.ಮೀ ಪ್ರದೇಶವನ್ನು ‘ಝೀರೋ ಟ್ರಾಫಿಕ್ ವಲಯ’ ಎಂದು ಘೋಷಿಸಲು ಉದ್ದೇಶಿಸಲಾಗಿದೆ. ಚಾಮುಂಡಿ ಬೆಟ್ಟದ ಮೇಲೆ ಮತ್ತು ಸುತ್ತಮುತ್ತ ನಿರ್ಮಾಣ ಚಟುವಟಿಕೆಗಳನ್ನು ತಡೆಗಟ್ಟಲು ಚಾಮುಂಡಿ ಬೆಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಬೇಕು” ಎಂದರು.

“ಚಾಮುಂಡಿ ಬೆಟ್ಟದ ಮೇಲಿನ ಅಭಿವೃದ್ಧಿ ಚಟುವಟಿಕೆಗಳು ಸೀಮಿತವಾಗಿರಬೇಕು. ಏಕೆಂದರೆ ಅದು ಪರಿಸರ ವ್ಯವಸ್ಥೆಗೆ ಹಾನಿ ಮಾಡುತ್ತದೆ. ಇದಲ್ಲದೆ, ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವುದರಿಂದ ಸೀಮಿತ ಕಾರ್ಯಗಳನ್ನು ಮಾತ್ರ ಕೈಗೊಳ್ಳಬೇಕು” ಎಂದು ಹೇಳಿದರು.

Advertisements

“ಕೇಂದ್ರ ಸರ್ಕಾರ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45.7 ಕೋಟಿ ರೂ. ಮಂಜೂರು ಮಾಡಿದ್ದರೂ, ಬೆಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಿರುವುದರಿಂದ ಕೇಂದ್ರ ಸರ್ಕಾರ ಅನುಮೋದಿಸಿದ ಅಭಿವೃದ್ಧಿ ಚಟುವಟಿಕೆಗಳಿಗೆ ಅಡ್ಡಿಯಾಗಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಗೂ ಮುನ್ನ ಜನರಿಗೆ ನೀಡಿದ ಎಲ್ಲ ಐದು ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ಕೇಂದ್ರವು ನಮಗೆ ಹೆಚ್ಚುವರಿ ಪ್ರಮಾಣದ ಅಕ್ಕಿಯನ್ನು ನೀಡದ ಕಾರಣ, ಸಿದ್ದರಾಮಯ್ಯ ಅವರು ಹೆಚ್ಚುವರಿ ಅಕ್ಕಿಯನ್ನು ಸಂಗ್ರಹಿಸಲು ನೆರೆಯ ರಾಜ್ಯಗಳನ್ನು ಸಂಪರ್ಕಿಸಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಈ ಸಮಸ್ಯೆ ಬಗೆಹರಿಯುತ್ತದೆ. ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗುವುದೆಂಬ ವಿಶ್ವಾಸವಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಮತಾಂತರ ವಿರೋಧಿ ಮತ್ತು ಗೋಹತ್ಯೆ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡ ಮಹದೇವಪ್ಪ, “ಬಲವಂತದ ಮತಾಂತರವನ್ನು ತಡೆಗಟ್ಟುವ ಕಾನೂನುಗಳು ಇದ್ದಾಗ ಮತ್ತು ರೈತರು ಹಳೆಯ ಹಸುಗಳನ್ನು ಬಲಿ ನೀಡಲು ಅವಕಾಶವಿದ್ದಾಗ, ಪ್ರತ್ಯೇಕ ಕಾನೂನುಗಳ ಅಗತ್ಯವಿಲ್ಲ. ಶಾಲಾ ಮಕ್ಕಳಿಗೆ ನೈಜ ಸಂಗತಿಗಳನ್ನು ಕಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆಯೇ ಹೊರತು ಇತಿಹಾಸವನ್ನು ತಿರುಚುವುದಿಲ್ಲ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X