ಗದಗ | ನಿಗೂಢ ಕಾಯಿಲೆ: ಅರ್ಧ ಗಂಟೆಯಲ್ಲೇ 20ಕ್ಕೂ ಹೆಚ್ಚು ಕುರಿಗಳು ಸಾವು

Date:

Advertisements

ಕುರಿಗಳಲ್ಲಿ ವಿಚಿತ್ರವಾದ ಸೋಂಕು ಕಾಣಿಸಿಕೊಂಡಿದ್ದು, ಕೇವಲ ಅರ್ಧ ಗಂಟೆಯಲ್ಲಿಯೇ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಕುರಿಗಳು ಅಂಥ್ರಾಕ್ಸ್‌ ಸೋಂಕಿಗೆ ತುತ್ತಾಗಿ ಸಾಯುತ್ತಿರಬಹುದು ಎಂದು ಶಂಕಿಸಲಾಗಿದೆ.

ಮುಂಡರಗಿ ತಾಲೂಕಿನ ಕೆರಳ್ಳಿ ತಾಂಡಾದಲ್ಲಿ ಕುರುಗಳು ಸಾವನ್ನಪ್ಪಿವೆ. ಕುರುಗಳು ನಿಂತಲೇ ಕುಸಿದು ಬೀಳುತ್ತಿದ್ದು, ಒದ್ದಾಡಿ ಸಾಯುತ್ತಿವೆ ಎಂದು ಹೇಳಲಾಗಿದೆ. ಕೆರಳ್ಳಿ ತಾಂಡಾದ ಪೋಮಪ್ಪ ಲಮಾಣಿ ಎಂಬುವವರು ಸಾಕಿದ್ದ ಕುರಿಗಳು ಸರಣಿಯಾಗಿ ಸಾವನ್ನಪ್ಪುತ್ತಿವೆ.

ಪೋಮಪ್ಪ ಅವರು 60 ಕುರಿಗಳನ್ನು ಸಾಕಿದ್ದರು. ಅವುಗಳಲ್ಲಿ 20 ಕುರಿತುಗಳು ಮೃತಪಟ್ಟಿವೆ. ವಿಷಯ ತಿಳಿದು ಸ್ಥಳಕ್ಕೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಮೃತ ಕುರಿಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಕುರಿಗಳಿಗೆ ಅಂಥ್ರಾಕ್ಸ್ ಸೋಂಕು ತಗುಲಿರಬಹುದು ಎಂದು ಶಂಕಿಸಿದ್ದಾರೆ.

Advertisements

ಅಂಥ್ರಾಕ್ಸ್ ಸೋಂಕು – ಬ್ಯಾಸಿಲಸ್ ಅಂಥಾಸಿಸ್ ಎಂಬ ಬ್ಯಾಕ್ಟಿರಿಯಾದಿಂದ ಹರಡುತ್ತದೆ. ಗಾಳಿ ಮೂಲಕ ಈ ಸೋಂಕು ಪರಸರಿಸುತ್ತದೆ. ಕುರಿಗಳು, ಹಸುಗಳು ಹಾಗೂ ಕುದುರೆಗಳಲ್ಲಿ ಈ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎಂಧು ವೈದ್ಯರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X