ಆಘಾತಕಾರಿ ಘಟನೆ | ವಿದ್ಯಾರ್ಥಿಗೆ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳು ನೆಕ್ಕಲು ಒತ್ತಾಯಿಸಿ ವಿಕೃತಿ

Date:

Advertisements

ಕಿರಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿ 30 ಬಾರಿ ಕಪಾಳಕ್ಕೆ ಹೊಡೆದು, ಉಗುಳನ್ನು ನೆಕ್ಕುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ ಹಾಕಿ, ಶೌಚಾಲಯದಲ್ಲಿ ಕೂಡಿ ಹಾಕಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರದಲ್ಲಿ ನಡೆದಿದೆ.

2ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸಂತ್ರಸ್ತ ವಿದ್ಯಾರ್ಥಿ ಆಘಾತಕ್ಕೊಳಗಾಗಿದ್ದು, ಒಂದು ತಿಂಗಳಿನಿಂದ ಜ್ವರದಿಂದ ಬಳಲುತ್ತಿದ್ದಾನೆ. ಮಾತ್ರವಲ್ಲದೆ, ಶಾಲೆಗೆ ಹೋಗಲು ನಿರಾಕರಿಸಿದ್ದಾನೆ. ಆತನ ನಡವಳಿಕೆಯಿಂದ ಆತಂಕಗೊಂಡ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಬಳಿ ತಾವು ಅನುಭವಿಸಿದ ಭಯಾನಕ ಘಟನೆಯ ಬಗ್ಗೆ ವಿದ್ಯಾರ್ಥಿ ಬಾಲಕ ಹೇಳಿಕೊಂಡಿದ್ದಾನೆ.

“ನಮ್ಮ ಮಗ ಹಲವು ದಿನಗಳಿಂದ ಜ್ವರ, ಆತಂಕದಿಂದ ಬಳಲುತ್ತಿದ್ದನು. ಮಾರ್ಚ್ 4 ರಂದು ಶಾಲೆಗೆ ಹೋಗುವಂತೆ ಕೇಳಿದಾಗ, ಆತ ಶಾಲೆಗೆ ಹೋಗಲು ನಿರಾಕರಿಸಿದನು. ಆಗ್ರಾದಲ್ಲಿ 3-4 ವೈದ್ಯರ ಬಳಿ ಕರದೊಯ್ದರೂ, ಆತನ ಅನಾರೋಗ್ಯಕ್ಕೆ ಕಾರಣವೇನು ಎಂಬುದು ಗೊತ್ತಾಗಲಿಲ್ಲ. ಇತ್ತೀಚೆಗೆ, ಆತ ನಿದ್ರೆಯಲ್ಲಿದ್ದಾಗ, ‘ಅವನು ನನ್ನನ್ನು ಹೊಡೆಯುತ್ತಾನೆ’ ಎಂದು ಕನವರಿಸುತ್ತಿದ್ದ. ಬಳಿಕ, ಆತನನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿದಾಗ, ತಾನು ಎದುರಿಸಿದ್ದ ಭೀಕರ ಘಟನೆಯ ಬಗ್ಗೆ ವೈದ್ಯರ ಬಳಿ ಹೇಳಿಕೊಂಡಿದ್ದಾನೆ” ಎಂದು ಬಾಲಕನ ತಾಯಿ ಹೇಳಿದ್ದಾರೆ.

Advertisements

“ಶಾಲಾ ಬಸ್‌ನಲ್ಲಿ ತೆರಳುವಾಗ ತನ್ನ ಹಿರಿಯ ವಿದ್ಯಾರ್ಥಿ ಶೂಗಳಿಗೆ ಉಗುಳಿ ಅದನ್ನು ನೆಕ್ಕಲು ಹೇಳಿದನು. ತನಗೆ 30 ಬಾಕಿ ಕಪಾಳಕ್ಕೆ ಹೊಡೆದನು. ಕತ್ತು ಹಿಸುಕಿ ಕೊಲ್ಲುವುದಾಗಿ ಬೆದರಿಕೆ ಹಾಕಿದನು. ಮಾತ್ರವಲ್ಲದೆ, ಶೌಚಾಲಯದಲ್ಲಿ ಕೂಡಿ ಹಾಕಿದ್ದನು” ಎಂದು ವೈದ್ಯರ ಬಳಿ ಬಾಲಕಿ ಹೇಳಿಕೊಂಡಿದ್ದಾನೆ.

ಬಳಿಕ ಪೋಷಕರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ” ಎಂದು ಆಗ್ರಾದ ಸಹಾಯಕ ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಈ ಪ್ರಕರಣವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವೈಯಕ್ತಿಕವಾಗಿ ನಿಭಾಯಿಸುವುದಾಗಿ ಹೇಳಿದ್ದಾರೆ. “ಸಂತ್ರಸ್ತ ಬಾಲಕನ ಪೋಷಕರು ಮಾರ್ಚ್‌ 4ರಂದು ನಮಗೆ ದೂರು ನೀಡಿದ್ದಾರೆ. ನಾವು ಒಂದು ಸಮಿತಿ ರಚಿಸಿದ್ದೇವೆ. ವಿದ್ಯಾರ್ಥಿಗಳ ಪ್ರಯಾಣಿಸುವ ಶಾಲಾ ಬಸ್‌ನ ಅಟೆಂಡರ್‌ಅನ್ನು ಅಮಾನತುಗೊಳಿಸಿದ್ದೇವೆ. ನಾವು ಬಸ್‌ನ ವಾಹನದ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿ ವಿದ್ಯಾರ್ಥಿಯನ್ನು ಶಾಲೆಗೆ ಬಾರದಂತೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X