ಬೀದರ್‌ | ಹೆಣ್ಣಿಗೆ ಹೆಣ್ಣು ಶತ್ರು ಎಂಬುದು ಶುದ್ಧ ಸುಳ್ಳು : ಪಾರ್ವತಿ ಸೋನಾರೆ

Date:

Advertisements

ಕಾನೂನು ಎಷ್ಟೇ ಕಠಿಣವಾಗಿದ್ದರೂ ಸಮಾಜದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿರುವುದು ಯಾಕೆ ಎಂಬ ಯಕ್ಷ ಪ್ರಶ್ನೆ ಸದಾ ಕಾಡುತ್ತಿದ್ದು, ಹೆಣ್ಣಿಗೆ ಹೆಣ್ಣು ಶತ್ರು ಎಂಬುದು ಶುದ್ಧ ಸುಳ್ಳು ಎಂದು ಜಿಲ್ಲಾ ಸರಕಾರಿ ನೌಕರರ ಮಹಿಳಾ ಸಂಘದ ಅಧ್ಯಕ್ಷೆ ಪಾರ್ವತಿ ವಿ. ಸೋನಾರೆ ಹೇಳಿದರು.

ಬೀದರ್ ಜಿಲ್ಲಾ ಸರಕಾರಿ ನೌಕರರ ಮಹಿಳಾ ಸಂಘ, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಲೇಖಕಿಯರ ಸಂಘದ ಸಹಯೋಗದಲ್ಲಿ ನಗರದ ತಾಯಿ ಮಗು ವೃತ್ತದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼ2025ನೇ ವರ್ಷ ಮಹಿಳಾ ದೌರ್ಜನ್ಯ ತಡೆ ದಿನಾಚರಣೆಯನ್ನಾಗಿ ಆಚರಿಸುತ್ತಿದೆ ಎಂದು ವಿಶ್ವಸಂಸ್ಥೆ ಹೇಳಿರುವುದು ಅತ್ಯಂತ ಖೇದಕರ ಮತ್ತು ನಾಚಿಕಿಗೇಡಿನ ಸಂಗತಿʼ ಎಂದು ಅಭಿಪ್ರಾಯಪಟ್ಟರು.

Advertisements

ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಭಾರತಿ ವಸ್ತ್ರದ ಮಾತನಾಡಿ, ʼಆಧುನಿಕ ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಭಾಗವಹಿಸುವ ಸಾಮರ್ಥ್ಯ‌ ಹೊಂದಿರುವ ಮಹಿಳೆ ಕಠಿಣ ಸಂದರ್ಭದಲ್ಲಿಯೂ ಮುನ್ನಡೆಯಬೇಕುʼ ಎಂದರು.

ಜಿಲ್ಲಾ ಸರಕಾರಿ ನೌಕರರ ಮಹಿಳಾ ಸಂಘದ ಪ್ರಧಾನ ಕಾರ್ಯದರ್ಶಿ ಗೀತಾ ಗಡ್ಡೆ, ʼಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕುಟುಂಬದ ಪುರುಷರ ಸಹಕಾರ ಅತ್ಯಂತ ಅವಶ್ಯಕವಾಗಿದೆ. ಭೇದ-ಭಾವ ಮರೆತು ಎಲ್ಲರೂ ಅಭಿವೃದ್ಧಿ ಪಥದತ್ತ ಹೆಜ್ಜೆ ಇಡಬೇಕಾಗಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ‌ʼನಮ್ಮ ಪೊಲೀಸ್‌ ನಮ್ಮ ಹೆಮ್ಮೆʼ ಮ್ಯಾರಾಥಾನ್

ಜಯದೇವಿ ಯದಲಾಪೂರೆ, ಪ್ರತಿಭಾ ಚಾಮಾ, ವಿಜಯಲಕ್ಮಿ ಕೌಟಗೆ, ಡಾ.ಶ್ರೇಯಾ ಮಹೇಂದ್ರಕರ್, ಸುಜಾತಾ ಪೂಜಾರಿ, ಸ್ವರೂಪರಾಣಿ ನಾಗೂರೆ, ಮಾಹಾನಂದಾ ಪಾಟೀಲ, ಚೆನ್ನಮ್ಮಾ ವಲ್ಲೇಪೂರೆ, ಕಾವೇರಿ ರಮೇಶ, ವಿದ್ಯಾವತಿ ಹಿರೇಮಠ, ಪದ್ಮಾ ಮಡಿವಾಳ, ಕು.ವಾಸವಿ ವಿಂದ್ಯಾ ಮಾಂತೇಶ ಸೇರಿದಂತೆ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X