ಸೌಂದರ್ಯ ವಿಕೃತಿ | ಮದುವೆ ಬಳಿಕ ದಪ್ಪ ಆಗಿದ್ದಾರೆಂದು ಪತ್ನಿಗೆ ಪತಿಯಿಂದ ಕಿರುಕುಳ

Date:

Advertisements

ಮದುವೆಗು ಮುನ್ನ ಸುಂದರವಾಗಿದ್ದೆ, ಸಣ್ಣಗಿದ್ದೆ. ಆದರೆ, ಮದುವೆ ಬಳಿಕ ದಪ್ಪ ಆಗಿದ್ದೀಯಾ ಎಂದು ದುರುಳ ಪತಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಪೀಣ್ಯದಲ್ಲಿ ವಾಸವಾಗಿರುವ ರಮ್ಯಶ್ರೀ ಅವರಿಗೆ ಆಕೆಯ ಪತಿ ಪಿಲಿ ಸಾಯಿಕುಮಾರ್‌ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ, ರಮ್ಯಶ್ರೀ ಮತ್ತು ಆಕೆಯ ತಂದೆಯ ಮೇಲೆ ಹಲ್ಲೆ ಮಾಡಿ, ಖಾರದ ಪುಡಿ ಎರಚಿ ವಿಕೃತಿ ಮೆರೆದಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಮಹಿಳೆ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಮ್ಯಶ್ರೀ ವೃತ್ತಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದಾರೆ. ಅವರು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆ ಮೂಲಕ ಪುಲಿ ಸಾಯಿಕುಮಾರ್ ಎಂಬಾತನನ್ನು 2021ರಲ್ಲಿ ವಿವಾಹವಾಗಿದ್ದರು. ದಂಪತಿಗಳು ಆರಂಭದಲ್ಲಿ ಅನ್ಯೋನ್ಯತೆಯಿಂದ ಇದ್ದರು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಸೌಂದರ್ಯದ ಕಾರಣಕ್ಕಾಗಿ ರಮಶ್ರೀಗೆ ಪುಲಿ ಸಾಯಿಕುಮಾರ್ ಕಿರುಕುಳ ನೀಡಲಾರಂಭಿಸಿದ್ದನೆಂದು ತಿಳಿದುಬಂದಿದೆ.

Advertisements

ಅಲ್ಲದೆ, ಇದೇ ಮಾರ್ಚ್‌ 6ರಂದು ತುರ್ತಾಗಿ ತನಗೆ 3 ಲಕ್ಷ ರೂಪಾಯಿ ಹಣ ಬೇಕು. ನಿನ್ನ ತಂದೆಯಿಂದ ಕೊಡುಸು ಎಂದು ರಮ್ಯಶ್ರೀಗೆ ಪುಲಿ ಒತ್ತಾಯಿಸಿದ್ದರು. ಹಣ ಕೊಡಿಸಲು ನಿರಾಕರಿಸಿದ್ದಕ್ಕೆ, ಜಗಳ ಮಾಡಿ, ಹಲ್ಲೆ ಎಸಗಿದ್ದ. ಮಾತ್ರವಲ್ಲದೆ, ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X