ಉಡುಪಿ | ಮನನೊಂದು ಮನೆ ತೊರೆದಿದ್ದ ತಾಯಿ, ರಕ್ಷಿಸಲ್ಪಟ್ಟ ಮಹಿಳೆ ಮಕ್ಕಳ ವಶಕ್ಕೆ

Date:

Advertisements

ಕಳೆದ ನಾಲ್ಕು ದಿನಗಳ ಹಿಂದೆ ವಿಶು ಶೆಟ್ಟಿ ದುಃಖಿತ ಮಹಿಳೆಯೊಬ್ಬರನ್ನು ರಕ್ಷಿಸಿ, ಸಖಿ ಸೆಂಟರಿಗೆ ದಾಖಲಿಸಿದ್ದು, ಇದೀಗ ಮಹಿಳೆಯ ಮಕ್ಕಳು ಪತ್ತೆಯಾಗಿದ್ದು ಮಕ್ಕಳಿಗೆ ಹಸ್ತಾಂತರಿಸಲಾಗಿದೆ.

ರಕ್ಷಣಾ ಸಮಯ ಮಹಿಳೆ ತನ್ನ ಹೆಸರು ಗಂಗಮ್ಮ, ತಿಪಟೂರಿನವರು ಎಂದು ಸುಳ್ಳು ಮಾಹಿತಿ ನೀಡಿದ್ದು, ಮಹಿಳೆ ಮೂಲತಃ ಶಿವಮೊಗ್ಗದವರಾಗಿದ್ದು ಯಾವುದೋ ಕಾರಣಕ್ಕೆ ಮನನೊಂದು ಮನೆ ಬಿಟ್ಟು ಉಡುಪಿಗೆ ಬಂದು ಅಸಹಾಯಕರಾಗಿದ್ದರು. ಸಖಿ ಸೆಂಟರಿನ ಸಿಬ್ಬಂದಿಗಳು ಮಹಿಳೆ ನೀಡಿದ ಮಾಹಿತಿ ಸರಿ ಇಲ್ಲದಿದ್ದರೂ ಮಕ್ಕಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ದಿನ ಮಹಿಳೆಯ ಮಕ್ಕಳು ಉಡುಪಿ ಸಖಿ ಸೆಂಟರಿಗೆ ಬಂದು ಕಾನೂನು ಪ್ರಕ್ರಿಯೆ ಮುಗಿಸಿ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಕಾಣೆಯಾದ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.

Advertisements

ವಿಶ್ವ ಮಹಿಳಾ ದಿನಾಚರಣೆ ದಿನದಂದು ನೊಂದ ಮಹಿಳೆಯನ್ನು ಸಖಿ ಸೆಂಟರಿನ ಸಿಬ್ಬಂದಿಗಳು ಮಕ್ಕಳಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಖಿ ಸೆಂಟರಿನ ಸಿಬ್ಬಂದಿ ಮಹಿಳೆಯ ಬಗ್ಗೆ ಉತ್ತಮ ಸಮಾಲೋಚನೆ ನಡೆಸಿದ್ದಾರೆ. ಜೊತೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ಕೂಡ ನೀಡಿದ್ದಾರೆ. ಮಹಿಳೆ ಮಕ್ಕಳಲ್ಲಿ ಯಾವುದೊ ವಿಚಾರಕ್ಕೆ ಮನನೊಂದು ಮನೆ ಬಿಟ್ಟು ಹೊರಟಿದ್ದಾರೆ. ಸರಿಯಾಗಿ ಕರ್ತವ್ಯ ನಿಭಾಯಿಸಿದಲ್ಲಿ ಇಂತಹ ಪ್ರಕರಣಗಳು ಇತ್ಯರ್ಥವಾಗುತ್ತವೆ. ಉಡುಪಿಯ ಸಖಿ ಸೆಂಟರ್ ಇಂತಹ ಹಲವು ಕೆಲಸಗಳನ್ನು ಈ ಹಿಂದೆ ನಿಭಾಯಿಸಿದ ಉದಾಹರಣೆಗಳಿದೆ.

  • ವಿಶು ಶೆಟ್ಟಿ ಅಂಬಲಪಾಡಿ
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X