ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ; ಲಿಂಗಾಯತ ನಾಯಕರಿಗೆ ಮಣೆ?

Date:

Advertisements

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಮುನ್ನೆಲೆಯಲ್ಲಿದೆ ಇದೀಗ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇಬ್ಬರು ಲಿಂಗಾಯತ ನಾಯಕರ ಹೆಸರನ್ನು ಫೈನಲ್ ಮಾಡಲಾಗಿದ್ದು, ಆ ಇಬ್ಬರಲ್ಲಿ ಒಬ್ಬರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಗದ್ದುಗೆ ಸಿಗಲಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ವಿ ಸೋಮಣ್ಣ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಚರ್ಚೆಯಾಗುತ್ತಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಬಿಜೆಪಿ ಅಧ್ಯಕ್ಷಗಿರಿ ಕೊಡಬೇಕೆಂದು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ಆದಾಗ್ಯೂ, ಹಾಲಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್‌ಗೆ ಬಿಜೆಪಿ ಶಿಸ್ತು ಕಮಿಟಿಯು ಎರಡು ಬಾರಿ ನೋಟಿಸ್ ಕೊಟ್ಟಿದೆ. ನೋಟಿಸ್‌ ಯತ್ನಾಳ್ ಉತ್ತರಿಸಿದ್ದು, ಅವರ ಉತ್ತರ ಸಮರ್ಥನೀಯ ಅಥವಾ ಸಮಂಜಸವಾಗಿಲ್ಲ ಎಂದು ಶಿಸ್ತು ಕಮಿಟಿ ಹೇಳಿದೆ. ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿ ಎದುರು ನೋಡುತ್ತಿದೆ ಎಂದು ಹೇಳಲಾಗುತ್ತಿದೆ.

Advertisements

ಆದರೆ, ಯತ್ನಾಳ್‌ ಕೂಡ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಅದರಲ್ಲೂ ಪಂಚಮಸಾಲಿ ಸಮುದಾಯದವರು. ಈ ಸಮುದಾಯಕ್ಕೆ ಬಿಜೆಪಿಯಲ್ಲಿರುವ ಏಕೈಕ ನಾಯಕ ಎಂದು ಯತ್ನಾಳ್ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಅವರ ವಿರುದ್ಧ ಕ್ರಮ ಕೈಗೊಂಡರೆ ಪಕ್ಷದ ವಿರುದ್ಧ ಪಂಚಮಸಾಲಿ ಸಮುದಾಯ ತಿರುಗಿಬೀಳಬಹುದು ಎಂಬ ಆತಂಕವೂ ಬಿಜೆಪಿಯಲ್ಲಿದೆ.

ಇನ್ನು, ಹಾಲಿ ಅಧ್ಯಕ್ಷ ವಿಜಯೇಂದ್ರ ಕೂಡ ಲಿಂಗಾಯತ ಸಮುದಾಯವರೇ ಆಗಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೂ, ಲಿಂಗಾಯತರು ಪಕ್ಷದಿಂದ ದೂರ ಉಳಿಯಬಹುದು ಎಂಬ ಎಚ್ಚರಿಕೆ ಬಿಜೆಪಿಯಲ್ಲಿದೆ. ಹೀಗಾಗಿ, ವಿಜಯೇಂದ್ರ ಸ್ಥಾನಕ್ಕೆ ಮತ್ತೊಬ್ಬ ಲಿಂಗಾಯತ ನಾಯಕರನ್ನೇ ಪ್ರತಿಷ್ಠಾಪಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎಂದು ತಿಳಿದುಬಂದಿದೆ.

ಹೀಗಾಗಿ, ಯುಡಿಯೂರಪ್ಪ ಅವರ ಆಪ್ತ, ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅಥವಾ ವಿಜಯೇಂದ್ರ ಬಣದ ಆಚೆಗೂ ಎಲ್ಲರೊಂದಿಗೆ ಒಡನಾಟ ಇಟ್ಟುಕೊಂಡಿರುವ ವಿ ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಗೇರಿಸಲು ಬಿಜೆಪಿ ಚಿಂತನೆ ನಡೆಸಿದೆ. ಈ ಇಬ್ಬರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಇಟ್ಟುಕೊಂಡಿದೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಅಂತಿಮವಾಗಿರುವ ಇಬ್ಬರೂ ಮನುವ್ಯಾದಿಗಳ ಚೌಕಿದಾರರು ಅವರು ಹಿಂದೆಯೂ ಲಿಂಗಾಯತ ಆಗಿರಲಿಲ್ಲ ಮುಂದೇನೂ ಆಗುವುದಿಲ್ಲ ಲಿಂಗಾಯತ ಅವರಿಗೆ ರಾಜಕೀಯ ದಂಧೆಗೆ ಒಂದು ಸರಕು ಅಷ್ಟೇ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X