ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

Date:

Advertisements

ಮಹಾ ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಲ್ಲಿಸಲಾದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಈ ಹಿಂದೆ ತಿಳಿಸಿತ್ತು.

ಇದನ್ನು ಓದಿದ್ದೀರಾ? ಕುಂಭಮೇಳ | ಭಕ್ತರ ಆತಂಕ ತಪ್ಪಿಸಲು ಕಾಲ್ತುಳಿತದ ವಾಸ್ತವ ತಿಳಿಸಿಲ್ಲ: ಸಿಎಂ ಆದಿತ್ಯನಾಥ್ ಸಮಜಾಯಿಷಿ

Advertisements

ಆದರೆ ಆಗಾಗಲೇ ಕೋಟ್ಯಾಂತರ ಮಂದಿ ಗಂಗಾ ನದಿ ನೀರಿನಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಈ ಡೇಟಾದ ಬಳಿಕ ಹಲವು ತಜ್ಞರು ಇದು ಆರೋಗ್ಯ ಸಮಸ್ಯೆಗೆ, ಚರ್ಮ ರೋಗಕ್ಕೆ ಕಾರಣವಾಗಬಹುದು ಎಂದು ಹೇಳಿದ್ದರು. ಆದರೆ ಸರ್ಕಾರ ಮಾತ್ರ ತನ್ನ ಎಂದಿನ ಚಾಳಿಯಂತೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿತ್ತು. ಹಾಗೆಯೇ ವರದಿಯನ್ನು ಮುಚ್ಚಿಡಲು ಯತ್ನಿಸಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಇದಾದ ಬೆನ್ನಲ್ಲೇ ಫೆಬ್ರವರಿ 28 ಮತ್ತು ಮಾರ್ಚ್ 7ರಂದು ನ್ಯಾಯಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ವರದಿಯು ಜನವರಿ 12ರಿಂದ ಗಂಗಾ ನದಿಯ ಐದು ಸ್ಥಳಗಳಲ್ಲಿ ಮತ್ತು ಯಮುನಾ ನದಿಯ ಎರಡು ಸ್ಥಳಗಳಲ್ಲಿ ವಾರಕ್ಕೆ ಎರಡು ಬಾರಿ ನೀರಿನ ಪರೀಕ್ಷೆ ನಡೆಸಿದ ವರದಿ ಎಂದು ಸಿಪಿಸಿಬಿ ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಮುಖ್ಯಸ್ಥರು ಕುಂಭಮೇಳಕ್ಕೆ ಹೋಗಿರುವ ಚಿತ್ರ ತೋರಿಸಿ: ಶಿಂದೆ ವಿರುದ್ಧ ರಾವತ್ ವಾಗ್ದಾಳಿ

ಹಾಗೆಯೇ ತಜ್ಞರ ಸಮಿತಿಯು ಡೇಟಾದಲ್ಲಿರುವ ವ್ಯತ್ಯಾಸದ ಸಮಸ್ಯೆಯನ್ನು ಪರಿಶೀಲಿಸಿದೆ. ಡೇಟಾವು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ನೀರಿನ ಗುಣಮಟ್ಟವನ್ನು ಉಲ್ಲೇಖಿಸಿದೆ. ಆದರೆ ಪ್ರವಾಹ, ಹರಿವು, ಇತರೆ ಅಂಶಗಳ ಕಾರಣಗಳಿಂದಾಗಿ ನೀರಿನ ಗುಣಮಟ್ಟ ಬದಲಾಗಬಹುದು ಎಂದು ವರದಿ ಹೇಳಿದೆ.

ಜನವರಿ 12ರಿಂದ ಫೆಬ್ರವರಿ 22ರವರೆಗೆ ಸಾಮೂಹಿಕ ಸ್ನಾನ ನಡೆದ 10 ಸ್ಥಳಗಳಲ್ಲಿನ ನೀರಿನ ಗುಣಮಟ್ಟದ ವಿಶ್ಲೇಷಣೆ ನಡೆಸಲಾಗಿದ್ದು, 20 ಸುತ್ತಿನ ಮೇಲ್ವಿಚಾರಣೆಯನ್ನು ಮಾಡಲಾಗಿದೆ. ಈ ವೇಳೆ ನೀರಿನ ಗುಣಮಟ್ಟ ಮಾನದಂಡದ ಮಿತಿಯೊಳಗಿತ್ತು ಎಂದು ವರದಿ ಉಲ್ಲೇಖಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X