ಬೀದರ್‌ | ರಾಷ್ಟ್ರೀಯ ಬಸವ ದಳದಿಂದ ಇಫ್ತಾರ್‌ ಕೂಟ ಆಯೋಜನೆ

Date:

Advertisements

ರಂಜಾನ್ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಬಸವ ದಳದ ವತಿಯಿಂದ ಸೌಹಾರ್ದ ಇಫ್ತಾರ್‌ ಕೂಟ ಏರ್ಪಡಿಸಲಾಯಿತು.

ಬೀದರ್‌ ನಗರದ ಬಸವ ಮಂಟಪದ ಹತ್ತಿರದ ರಾಷ್ಟ್ರೀಯ ಬಸವದಳದ ಜಿಲ್ಲಾ ಉಪಾಧ್ಯಕ್ಷ ಶರಣ ಶಿವಶರಣಪ್ಪ ಪಾಟೀಲ ಅವರ ಮನೆ ಮುಂಭಾಗದಲ್ಲಿ ನಡೆಯಿತು.

ಬೆಂಗಳೂರು ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ʼಪ್ರತಿ ವರ್ಷದಂತೆ ರಂಜಾನ್‌ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್‌ ಕೂಟ ಏರ್ಪಡಿಸಲಾಗಿದೆ’ ಎಂದರು.

Advertisements
WhatsApp Image 2025 03 09 at 8.08.52 PM

‘ಭಾರತ ಜಾತ್ಯಾತೀತ ರಾಷ್ಟ್ರ. ಸಂವಿಧಾನ ಪ್ರಕಾರ ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ ಸೇರಿದಂತೆ ಎಲ್ಲ ಧರ್ಮೀಯರು ಸಮಾನವಾಗಿ ಬದುಕಬೇಕು. ಮುಸ್ಲಿಂ ಬಾಂಧವರು ಆಚರಿಸುತ್ತಿರುವ ರಂಜಾನ್ ಮಾಸದ ಹಬ್ಬಕ್ಕೆ ನಾವೆಲ್ಲರೂ ಶುಭ ಹಾರೈಸಿ, ಸೌಹಾರ್ದತೆ ಸಾರುತ್ತೇವೆʼ ಎಂದರು.

ರಾಷ್ಟ್ರೀಯ ಬಸವ ದಳದ ಪ್ರಮುಖರಾದ ಶಿವರಾಜ ಪಾಟೀಲ ಅತಿವಾಳ, ಶಿವಶರಣಪ್ಪ ಪಾಟೀಲ, ಗಣಪತಿ ಬಿರಾದಾರ, ಶ್ರೀನಾಥ ಕೋರೆ, ರವಿಕಾಂತ ಬಿರಾದಾರ, ವಿಶ್ವನಾಥ ಪಾಟೀಲ, ಮಲ್ಲಿಕಾರ್ಜುನ ಶಹಾಪುರ, ಭರತ್ ಪಾಟೀಲ, ಭೀಮರಾವ ಪೊಲೀಸ್ ಪಾಟೀಲ ಮತ್ತು ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಂಡು ಹಣ್ಣು-ಹಂಪಲು, ಉಪಹಾರ ಸೇವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X