ಯಾದಗಿರಿ | ಹೆಚ್ಚಿದ ಬಿಸಿಲ ಝಳ; ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿರುವ ಇಲಿಯಾಸ್ ಪಟೇಲ್

Date:

Advertisements

ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ.

ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ. ಬಾನಲ್ಲಿ ಹಾರಾಡುವ ಪಕ್ಷಿಗಳಂತೂ ಬಿಸಿಲ ತಾಪಕ್ಕೆ ತಲೆತಿರುಗಿ ನೆಲಕ್ಕಪ್ಪಳಿಸುತ್ತಿವೆ. ಇವುಗಳಲ್ಲಿ ಎತ್ತರದಲ್ಲಿ ಹಾರಾಡುವ ಹದ್ದು, ಕಾಗೆ, ಪಾರಿವಾಳಗಳೂ ಹೆಚ್ಚಿನ ಸಂಖ್ಯೆಯಲ್ಲಿ ಕೆಳಗೆ ಬೀಳುತ್ತಿವೆ. ಕೆರೆ ಕಟ್ಟೆಗಳು ಬರಿದಾಗಿರುವುದರಿಂದ ಕಾಡು ಪ್ರಾಣಿಗಳಿಗೂ ನೀರು ಸಿಗುತ್ತಿಲ್ಲ. ಹಿಂದೆ ಉದ್ಯಾನಗಳು, ಕೆರೆ-ಕುಂಟೆಗಳು ತುಂಬಿರುತ್ತಿದ್ದವು. ಹಳ್ಳ ಕೊಳ್ಳಗಳಲ್ಲೂ ನೀರಿರುತ್ತಿತ್ತು. ಆದರೆ ಈಗ ಕೆರೆಗಳು ಮಾಯವಾಗಿವೆ. ಪ್ರಾಣಿ-ಪಕ್ಷಿಗಳು ತಮ್ಮ ದಾಹ ಇಂಗಿಸಿಕೊಳ್ಳಲು ನೀರು ಸಿಗದ ಸನ್ನಿವೇಶ ಸೃಷ್ಟಿಯಾಗಿದೆ.

“ಗಿರಿನಾಡು ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಇಲಿಯಾಸ್ ಪಟೇಲ್ ಅವರು ಪ್ರಾಣಿ ಮತ್ತು ಪಕ್ಷಿಗಳಿಗಾಗಿ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಸದಾ ನಿರಂತರವಾಗಿ ಸಮಾಜಮುಖಿ ಸೇವೆ ನಡೆಸುತ್ತಿರುವ ಪ್ರಮುಖ ವ್ಯಕ್ತಿಯಾಗಿದ್ದಾರೆ. ಅವರು ತಮ್ಮ ದಯಾಳತೆಯನ್ನು ಪ್ರದರ್ಶಿಸಿ, ಪ್ರತಿದಿನವೂ ಬಳಕೆಯಾದ ನೀರಿನ ಬಾಟಲಿಗಳನ್ನು ಸಂಗ್ರಹಿಸಿ, ತಮ್ಮ ಮನೆಯ ಸುತ್ತಲೂ ಇರುವ ನಾಲ್ಕೈದು ಮರಗಳಿಗೆ ಸುಮಾರು ಹತ್ತು ಹದಿನೈದು ಬಾಟಲಿಗಳು ಕತ್ತರಿಸಿ ಗಿಡ, ಮರಗಳಿಗೆ ನೇತಾಕಿ ಅವುಗಳಲ್ಲಿ ಎರಡು ಮೂರು ಬಾಟಲಿಗಳಲ್ಲಿ ಪಕ್ಷಿಗಳಿಗೆ ತಿನ್ನಲು ದವಸಧಾನ್ಯ ಹಾಕಿ ಉಳಿದ ಬಾಟಲಿಗಳಲ್ಲಿ ನೀರು ಹಾಕಿ, ಪ್ರತಿನಿತ್ಯ ಬಾಟಲಿಗಳನ್ನು ಸ್ವಚ್ಛಗೊಳಿಸಿ ಪುನಃ ನೀರು ಹಾಕುವ ಮೂಲಕ ಪ್ರಕೃತಿಯ ಪ್ರಾಣಿ ಮತ್ತು ಪಕ್ಷಿಗಳಿಗೆ ಆಹಾರ, ಪಾನೀಯವನ್ನು ಒದಗಿಸಿ ಈ ಮೂಲಕ ಆತ್ಮತೃಪ್ತಿ ಪಡೆದುಕೊಳ್ಳುತ್ತಿರುವೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ನೀರಾವರಿ ಹಕ್ಕಿಗಾಗಿ ಹೋರಾಟಕ್ಕೆ ಮುಂದಾಗಬೇಕು: ನಿವೃತ್ತ ನ್ಯಾ. ವಿ ಗೋಪಾಲಗೌಡ

“ಮಾಜದ ಪ್ರತಿ ಸದಸ್ಯನೂ ತಮ್ಮ ಸುತ್ತಲೂ ಇರುವ ಜೀವಜಾತಿಗಳಿಗೆ ಕಳಕಳಿಯಿಂದ ಮತ್ತು ಕರ್ತವ್ಯದಿಂದ ವರ್ತಿಸುವುದರಿಂದ, ಸಾಂಸ್ಕೃತಿಕ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ. ಇನ್ನೊಂದು ಪ್ರಮುಖ ಅಂಶವೆಂದರೆ, ಅವರು ಈ ಸೇವೆಯನ್ನು ಮಾಡುತ್ತಿದ್ದು, ಇತರರು ಇದರಿಂದ ಪ್ರೇರಿತವಾಗಿ ತಮ್ಮ ಸಮುದಾಯಗಳಲ್ಲಿ ಕಾರ್ಯಗಳನ್ನು ಮಾಡಬೇಕು” ಎಂದು ಸಮುದಾಯದ ಜನರಿಗೆ ತಿಳಿಸಿದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X