ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೈಪಿಡಿ ಬಿಡುಗಡೆ

Date:

Advertisements

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 134ನೇ ಜನ್ಮ ಜಯಂತಿ ನಿಮಿತ್ತ ಕೊಡುಗೆಯಾಗಿ ನಾಡಿನ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಅನುಕೂಲವಾಗಲು ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆಗೊಳಿಸಲಾಗಿದೆ.

ವಿಜಯಪುರ ನಗರದ ಗಾಂಧಿ ಚೌಕ ಚರ್ಚ್ ಸಭಾಂಗಣದಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ, ದಲಿತ ವಿದ್ಯಾರ್ಥಿ ಪರಿಷತ್ತಿನ ಹಿತೈಶಿ ಶಿಕ್ಷಕ ಶಕರುಂದ ಸಿದ್ದಗೊಳಿಸಿರುವ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಾದರ್ ಟಿಯೋಲೋ ಮೆಚಾದೊ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಗುರಿಯನ್ನ ಸಾಧಿಸಬೇಕಾದರೆ ಛಲ ಬಿಡದೆ ಓದಬೇಕು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಶಿಸ್ತು ಪಾಲಿಸಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ” ಎಂದರು.

Advertisements

ವಿದ್ಯಾರ್ಥಿ ಪರಷತ್‌ನ ಸಂಸ್ಥಾಪಕ, ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ, “ವಿದ್ಯಾರ್ಥಿಗಳು ದೇಶದ ಭವಿಷ್ಯತ್ತಿನ ಪ್ರಜೆಗಳು. ಸೈನಿಕರು ಯುದ್ಧಕ್ಕೆ ಹೋಗಬೇಕಾದರೆ ಯಾವರೀತಿ ತಯಾರಿ ಮಾಡುತ್ತಾರೋ ಅದೇ ರೀತಿ ಪರೀಕ್ಷೆ ಬರೆಯಲು ತಾವುಕೂಡ ತಯಾರಿ ಮಾಡಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ನಾಗರಿಕ ಸಮಾಜದ ಉನ್ನತ ಅಧಿಕಾರಿಗಳಾಗಿಯೂ ಕೆಲಸ ನಿರ್ವಹಿಸುವ ಗುರಿಯನ್ನು ಹೊಂದಿರಬೇಕು. ಮಹಾನ್ ಚೇತನಗಳ ಬಗ್ಗೆ ನಮಗೆ ಅರಿವಿರಬೇಕು” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆ

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ಅಜಮನಿ, ಪರಿಷತ್ ಮುಖಂಡ ಸಂದೇಶ್ ಕುಮುಟಗಿ, ಶಂಕರ ಬಸರಗಿ, ಯುವರಾಜ್ ಓಲೇಕಾರ್, ಪಂಡಿತ ಯಲಗೋಡ ಮತ್ತು ವಿದ್ಯಾರ್ಥಿಗಳು ಅನೌಪಚಾರಿಕ ಸಂಸ್ಥೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X