ರಾಯಚೂರು | ವಸತಿ ನಿಲಯಗಳ ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಆಗ್ರಹ

Date:

Advertisements

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕು ವ್ಯಾಪ್ತಿಯ ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊಸ ಮತ್ತು ಹಳೆಯ ಮಹಿಳಾ ಕಾರ್ಮಿಕರಿಗೆ ನಾಲ್ಕೈದು ತಿಂಗಳುಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ವಸತಿ ನಿಲಯಗಳ ಕಾರ್ಮಿಕರ ಸಂಘ, ಲಿಂಗಸೂಗೂರು ತಾಲೂಕು ಘಟಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಮರಿಯಮ್ಮ ಅವರಿಗೆ ಹಕ್ಕೊತ್ತಾಯ ಸಲ್ಲಿಸಿತು.

ಲಿಂಗಸೂಗೂರು ತಾಲೂಕು ವ್ಯಾಪ್ತಿಯಲ್ಲಿರುವ ಹಿಂದುಳಿದ ವರ್ಗದ ವಸತಿ ನಿಲಯ, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಯಾಗದೆ ಇರುವುದರಿಂದ ಕುಟುಂಬ ನಿರ್ವಹಣೆ ದುಸ್ತರವಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಮೌಖಿಕವಾಗಿ ಅಧಿಕಾರಿಗಳ ಗಮನಕ್ಕೆ ತಂದರೂ ಇಲ್ಲಿಯವರೆಗೂ ಬೇಡಿಕೆ ಈಡೇರಿಸಿಲ್ಲ ಎಂದು ಸಂಘದ ಸದಸ್ಯರು ಬೇಸರ ವ್ಯಕ್ತಪಡಿಸಿದರು.

ನಾಲ್ಕೈದು ತಿಂಗಳಿಂದ ವೇತನ ಪಾವತಿಯಾಗದೆ ಬಾಕಿ ಉಳಿಸಿಕೊಳ್ಳಲಾಗಿದೆ. ಇದರಿಂದ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಕ್ಕಳ ಓದು, ಆರೋಗ್ಯ, ಇತರೆ ಖರ್ಚು-ವೆಚ್ಚಗಳನ್ನು ಸರಿದೂಗಿಸಲು ಸಾಲ-ಸೂಲ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಇದರಿಂದ ಜೀವನ ಅತಂತ್ರವಾಗಿದೆ. ನಿತ್ಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಹೆಚ್ಚಾಗುತ್ತಿದ್ದು ಜೀವನವನ್ನು ಮತ್ತೂ ಕೆಟ್ಟದಾಗಿಸಿದೆ” ಎಂದು ಅಳಲು ತೋಡಿಕೊಂಡರು.

ಹದಿನೈದು ದಿನಗಳ ಒಳಗಾಗಿ ಬಾಕಿ ವೇತನ ಜಮಾ ಮಾಡಬೇಕು. ಇಲ್ಲದಿದ್ದರೆ ವಸತಿ ನಿಲಯಗಳು ಕೆಲಸ ನಿಲ್ಲಿಸಿ ಇಲಾಖೆ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರಾಯಚೂರು | ಹಟ್ಟಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಏ.2ರಂದು ಸಿಐಟಿಯು ಪ್ರತಿಭಟನೆ

Advertisements

ಈ ಸಂದರ್ಭದಲ್ಲಿ ವಸತಿ ನಿಲಯ ಕಾರ್ಮಿಕ ಮುಖಂಡರಾದ ದೇವಮ್ಮ ಈಚನಾಳ, ನಸ್ರೀನ್, ಕಮಲಮ್ಮ ಹಾಗೂ ಟಿಯುಸಿಐ ರಾಜ್ಯ ಸಮಿತಿ ಸದಸ್ಯ ಜಿ. ತಿಪ್ಪರಾಜ, ಬಸವರಾಜ ಹೆಸರೂರ ಸೇರಿದಂತೆ ವಸತಿ ನಿಲಯಗಳ ಕಾರ್ಮಿಕರು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X