ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

Date:

Advertisements

ಮುಸ್ಲಿಂ ಯುವಕನೊಬ್ಬನನ್ನು ಮೊಬೈಲ್ ಕಳ್ಳನೆಂದು ಶಂಕಿಸಿ ಆತನನ್ನು ಮರಕ್ಕೆ ಕಟ್ಟಿ, ಹಲ್ಲೆ ನಡೆಸಿ ‘ಜೈ ಶ್ರೀರಾಮ್’ ಎಂದು ಹೇಳುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.

ಜೂ.13 ರಂದು ಸಾಹಿಲ್‌ ಎಂಬುವರು ತನ್ನ ಗ್ರಾಮದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಮೂವರು ಯುವಕರು ಬಂದು ಆತನನ್ನು ಬಲವಂತವಾಗಿ ತಮ್ಮ ಬೈಕ್‌ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೊಬೈಲ್‌ ಕಳವಿನ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾನು ಮೊಬೈಲ್‌ ಕದ್ದಿಲ್ಲ ಎಂದು ಹೇಳಿದಾಗ ಸಾಹಿಲ್‌ನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸುವುದರ ಜೊತೆ ತಲೆಯನ್ನು ಬೋಳಿಸಿದ್ದಾರೆ. ನಂತರ ಬಲವಂತವಾಗಿ “ಜೈ ಶ್ರೀರಾಮ್” ಹೇಳುವಂತೆ ಹಲ್ಲೆ ಮಾಡಿದ್ದಾರೆ.

ಸಾಹಿಲ್‌ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡು ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಆದರೆ ಪ್ರಕರಣದ ಬಗ್ಗೆ ಮಾಹಿತಿಯನ್ನು ತಿಳಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು, ಮೊಬೈಲ್‌ ಕಳ್ಳನೆಂದು ಸಾಹಿಲ್‌ ಅವರನ್ನೇ ಬಂಧಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

ಈ ಬಗ್ಗೆ ಜೂನ್ 17 ರಂದು, ಸಾಹಿಲ್‌ನ ಪೋಷಕರು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅವರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಆನಂತರ ತನಿಖೆ ನಡೆಸಿದ ಬಳಿಕ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಕಳ್ಳತನದ ಶಂಕೆಯಲ್ಲಿ ಅದೇ ಗ್ರಾಮದ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂತ್ರಸ್ತನ ಕುಟುಂಬದವರು ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಎಎಸ್‌ಪಿ ಎಸ್ ಎನ್ ತಿವಾರಿ ತಿಳಿಸಿದ್ದಾರೆ.

‌“ಈ ಮೊದಲು ಪೊಲೀಸರು ತಮ್ಮನ್ನು ಬೆದರಿಸಿದ್ದು ಮಾತ್ರವಲ್ಲದೆ ತಮ್ಮ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದರು. ಅವರು ಶ್ರೀಮಂತ ಜನರು. ನಾವು ಬಡವರು. ಆರೋಪಿಗಳು ಇನ್ನೂ ಬೆದರಿಕೆ ಹಾಕುತ್ತಲೇ ಇದ್ದಾರೆ” ಎಂದು ಎಂದು ಸಾಹಿಲ್‌ನ ತಾಯಿ ನೂರ್ ಬಾನೋ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X