ಕುಂಭಮೇಳ ಪ್ರವಾಸ ಪ್ಯಾಕೇಜ್‌ ಹೆಸರಿನಲ್ಲಿ ₹70 ಲಕ್ಷ ವಂಚನೆ; ಆರೋಪಿಯ ಬಂಧನ

Date:

Advertisements

ಇತ್ತೀಚೆಗೆ ನಡೆದ ಮಹಾ ಕುಂಭಮೇಳಕ್ಕೆ ಪ್ರವಾಸ ಕರೆದುಕೊಂಡು ಹೋಗುವ ಪ್ಯಾಕೇಜ್‌ ಹೆಸರಿನಲ್ಲಿ ಸಾರ್ವಜನಿಕರಿಗೆ ಬರೋಬ್ಬರಿ ₹70 ವಂಚಿಸಿದ್ದ ಆರೋಪಿಯನ್ನು ಕಡೆಗೂ ಬೆಂಗಳೂರಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್‌ ಬಂಧಿತ ಆರೋಪಿ.

ಟೂರ್ಸ್‌ ಅಂಡ್‌ ಟ್ರಾವೆಲ್ಸ್‌ ಒಂದರ ಪ್ರತಿನಿಧಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ವಾಟ್ಸಾಪ್‌ ಗ್ರೂಪ್‌ಗಳಲ್ಲಿ ನಕಲಿ ಜಾಹಿರಾತು ನೀಡಿ ಜನರನ್ನು ಮರಳು ಮಾಡುತ್ತಿದ್ದ ರಾಘವೇಂದ್ರನಿಂದ ನೂರಾರು ಜನ ಅಮಾಯಕರು ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ.

ಕುಂಭಮೇಳದ 7 ದಿನಗಳ ಪ್ರವಾಸಕ್ಕೆಂದು ಒಬ್ಬೊಬ್ಬರಿಂದ ₹49 ಸಾವಿರ ಸಂಗ್ರಹಿಸುತ್ತಿದ್ದ. ಇದೇ ರೀತಿ ನೂರಕ್ಕೂ ಹೆಚ್ಚು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿಯು ಕೆಲವರಿಗೆ ಟಿಕೆಟ್‌ ಬುಕ್‌ ಮಾಡಿ ನಂತರ ರದ್ದು ಮಾಡುತ್ತಿದ್ದ. ಇನ್ನೂ ಕೆಲವರಿಗೆ ಪ್ರಯಾಗ್‌ರಾಜ್‌ಗೆ ತೆರಳಿದ ಬಳಿಕ ವಾಪಸ್‌ ಟಿಕೆಟ್‌ ಬುಕ್‌ ಮಾಡದೇ ಫೋನ್‌ ಆಫ್‌ ಮಾಡಿಕೊಳ್ಳುತ್ತಿದ್ದ. ಈ ರೀತಿ ವಂಚನೆಗೊಳಗಾದ 20 ಮಂದಿ ಆತನ ವಿರುದ್ಧ ದೂರು ನೀಡಿದ್ದು, ₹70 ಲಕ್ಷ ಕಳೆದುಕೊಂಡಿರುವುದಾಗಿ ಹೇಳಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements

ಇದನ್ನೂ ಓದಿ: ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಇನ್ನು ಸಾರ್ವಜನಿಕರಿಗೆ ವಂಚಿಸಿ ಸಂಗ್ರಹಿಸಿದ್ದ ಹಣವನ್ನು ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದು, ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X